ಆರ್. ಅಶ್ವಿನ್'ಗೆ ದಿಲೀಪ್ ಸರ್'ದೇಸಾಯಿ ಸ್ಮಾರಕ ಪ್ರಶಸ್ತಿ: ಹಾಸ್ಯ ಚಟಾಕಿ ಹಾರಿಸಿದ ಅಶ್ವಿನ್ ಅಶ್ವಿನ್

Published : Mar 09, 2017, 08:27 AM ISTUpdated : Apr 11, 2018, 01:05 PM IST
ಆರ್. ಅಶ್ವಿನ್'ಗೆ ದಿಲೀಪ್ ಸರ್'ದೇಸಾಯಿ  ಸ್ಮಾರಕ ಪ್ರಶಸ್ತಿ: ಹಾಸ್ಯ ಚಟಾಕಿ ಹಾರಿಸಿದ ಅಶ್ವಿನ್ ಅಶ್ವಿನ್

ಸಾರಾಂಶ

ಟೀಂ ಇಂಡಿಯಾ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಸ್ಮಾರಕ  ಉಪನ್ಯಾಸ ಕಾರ್ಯಕ್ರಮದಲ್ಲಿ ಕಾವೇರಿ ನೀರು ಕುರಿತ ಒಂದು ಹಾಸ್ಯ ಪ್ರಸಂಗ ನಡೆಯಿತು.

ಬೆಂಗಳೂರು(ಮಾ.09): ಟೀಂ ಇಂಡಿಯಾ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಸ್ಮಾರಕ  ಉಪನ್ಯಾಸ ಕಾರ್ಯಕ್ರಮದಲ್ಲಿ ಕಾವೇರಿ ನೀರು ಕುರಿತ ಒಂದು ಹಾಸ್ಯ ಪ್ರಸಂಗ ನಡೆಯಿತು.

ನಿನ್ನೆ ಬೆಂಗಳೂರಿನಲ್ಲಿ ಬಿಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ಫಾರೂಕ್ ಇಂಜಿನಿಯರ್ ಉಪನ್ಯಾಸ ನೀಡಿದರು. ಇದೇ ಕಾರ್ಯಕ್ರಮದಲ್ಲಿ ಆರ್. ಅಶ್ವಿನ್ ಅವರಿಗೆ ದಿಲೀಪ್ ಸರ್​ದೇಸಾಯಿ  ಸ್ಮಾರಕ ಪ್ರಶಸ್ತಿ ಪಡೆದರು.  ಅಶ್ವಿನ್​ಗೆ ಪ್ರಶಸ್ತಿ ನೀಡಿದ ಫಾರೂಕ್ ಎಂಜಿನಿಯರ್, ‘ಸ್ಪಿನ್ನರ್‌ಗಳಾದ ಪ್ರಸನ್ನ, ಚಂದ್ರಶೇಖರ್ ಮತ್ತು ನಿಮ್ಮನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಕರ್ನಾಟಕದ ನೀರಿನಲ್ಲಿ ಅಂತಹದ್ದೇನು ಗುಣವಿದೆ..?’ ಎಂದು ಕೇಳಿದರು. ಪ್ರಶ್ನೆಯ ಸೂಕ್ಷ್ಮವನ್ನು ಗ್ರಹಿಸಿದ ತಮಿಳುನಾಡಿನ ಅಶ್ವಿನ್, ‘ನನ್ನ ಮಾತುಗಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ.  ತಮಿಳುನಾಡಿನಲ್ಲಿ ನಮಗೆ ಇತ್ತೀಚೆಗೆ  ಕಾವೇರಿ ನೀರು ಲಭಿಸಿದೆ’ ಎಂದರು.

ಕ್ರಿಕೆಟಿಗನ ಈ ಹಾಸ್ಯಭರಿತ ಉತ್ತರ ಕಾರ್ಯಕ್ರಮದಲ್ಲಿದ್ದ ಪ್ರೇಕ್ಷಕರ ಮುಖದಲ್ಲಿ ನಗು ತರಿಸಿದ್ದು ಮಾತ್ರ ನಿಜ..

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?