
ದುಬೈ(ಸೆ.18): ಏಷ್ಯಾಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಪಾಕಿಸ್ತಾನ ಇದೀಗ ಟೀಂ ಇಂಡಿಯಾ ವಿರುದ್ಧದ ಹೋರಾಟಕ್ಕೆ ಸಿದ್ಧತೆ ಆರಂಭಿಸಿದೆ. ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತವನ್ನ ಬಗ್ಗುಬಡಿದ ಪಾಕ್ ಇದೀಗ ಏಷ್ಯಾಕಪ್ ಟೂರ್ನಿಯಲ್ಲೂ ಗೆಲುವಿನ ವಿಶ್ವಾಸದಲ್ಲಿದೆ.
ಟೀಂ ಇಂಡಿಯಾ ವಿರುದ್ಧ ಮಹತ್ವದ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಮಾರ್ಗದರ್ಶಕರ ನೆರವಿಲ್ಲದೆ ಕಣಕ್ಕಿಳಿಯಬೇಕಿದೆ. ಪಾಕಿಸ್ತಾನ ವೇಗದ ಬೌಲಿಂಗ್ ಕೋಚ್ ಅಜರ್ ಮೆಹಮೂದ್ ದಿಢೀರ್ ಪಾಕಿಸ್ತಾನಕ್ಕೆ ವಾಪಾಸ್ಸಾಗಿದ್ದಾರೆ.
ಬೌಲಿಂಗ್ ಕೋಚ್ ಅಜರ್ ಸಂಬಂಧಿ ಸಾವಿನಿಂದ ಏಷ್ಯಾಕಪ್ ಟೂರ್ನಿಯಿಂದ ದಿಢೀರ್ ವಾಪಾಸ್ಸಾಗಿದ್ದಾರೆ. ಸೂಪರ್ ಫೋರ್ ಪಂದ್ಯದ ವೇಳೆ ಅಜರ್ ಮತ್ತೆ ಪಾಕಿಸ್ತಾನ ತಂಡ ಸೇರಿಕೊಳ್ಳಲಿದ್ದಾರೆ. ಆದರೆ ಭಾರತ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.