
ದುಬೈ(ಸೆ.17): ಏಷ್ಯಾಕಪ್ ಟೂರ್ನಿಯ ಅಫ್ಘಾನಿಸ್ತಾನ ವಿರುದ್ಧದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಶ್ರೀಲಂಕಾ ಎಚ್ಚರಿಕೆಯ ಹೋರಾಟಕ್ಕೆ ಮುಂದಾಗಿದೆ. ಗೆಲುವಿಗೆ 250 ರನ್ ಟಾರ್ಗೆಟ್ ಪಡೆದಿರುವ ಲಂಕಾ 2 ವಿಕೆಟ್ ಕಳೆದುಕೊಂಡು ಗೆಲುವಿಗಾಗಿ ಹೋರಾಟ ನಡೆಸುತ್ತಿದೆ.
ಆರಂಭಿಕ ಕುಸಾಲ್ ಮೆಂಡೀಸ್ ಶೂನ್ಯಕ್ಕೆ ಔಟಾದರು. ಈ ಮೂಲಕ ಲಂಕಾ ತಂಡದ ಆತಂತಕ್ಕೆ ಕಾರಣರಾದರು. ಆದರೆ ಉಪುಲ್ ತರಂಗ ಹಾಗೂ ಧನಂಜಯ್ ಡಿಸಿಲ್ವ ಜೊತೆಯಾಟದಿಂದ ಲಂಕಾ ಚೇತರಿಸಿಕೊಂಡಿತು. ಧನಂಜಯ್ 23 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ಸದ್ಯ ಶ್ರೀಲಂಕಾ 2 ವಿಕೆಟ್ ನಷ್ಟಕ್ಕೆ 63 ರನ್ ಸಿಡಿಸಿದೆ.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ 249 ರನ್ ಸಿಡಿಸಿತು. ರಹಮತ್ ಶಾ 72 , ಇಸಾನುಲ್ಹಾ ಶಾಹ 45, ಹಶ್ಮತುಲ್ಹಾ ಶಾಹಿದಿ 37 ರನ್ಗಳ ಕಾಣಿಕೆ ನೀಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.