
ಕೊಲಂಬೊ(ಸೆ.25]: ಏಷ್ಯಾಕಪ್ನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ ವಿರುದ್ಧ ಸೋಲುಂಡು ಗುಂಪು ಹಂತದಲ್ಲೇ ಹೊರಬಿದ್ದ ಶ್ರೀಲಂಕಾ ತಂಡದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯಾಗಿದೆ.
ಏಂಜೆಲೋ ಮ್ಯಾಥ್ಯೂಸ್ರನ್ನು ನಾಯಕನ ಸ್ಥಾನದಿಂದ ವಜಾಗೊಳಿಸಿ, ದಿನೇಶ್ ಚಾಂಡಿಮಲ್ಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಟೆಸ್ಟ್ ತಂಡದ ನಾಯಕರಾಗಿದ್ದ ಚಾಂಡಿಮಲ್, ಮುಂಬರುವ ಇಂಗ್ಲೆಂಡ್ ಪ್ರವಾಸದಿಂದ ಎಲ್ಲಾ ಮಾದರಿಯ ತಂಡಕ್ಕೆ ನಾಯಕರಾಗಲಿದ್ದಾರೆ.
‘ರಾಷ್ಟ್ರೀಯ ಆಯ್ಕೆಗಾರರು ಮ್ಯಾಥ್ಯೂಸ್ಗೆ ನಾಯಕತ್ವ ತ್ಯಜಿಸುವಂತೆ ಮನವಿ ಮಾಡಿದರು’ ಎಂದು ಲಂಕಾ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ನಾಯಕತ್ವ ತ್ಯಜಿಸಿದ ಬಳಿಕ, ಮಂಡಳಿಗೆ ಪತ್ರ ಬರೆದಿರುವ ಮ್ಯಾಥ್ಯೂಸ್ ತಮ್ಮನ್ನು ಬಲಿಪಶು ಮಾಡಲಾಗಿದೆ ಎಂದಿದ್ದಾರೆ. ಇದೇ ವೇಳೆ ಈ ರೀತಿ ಅವಮಾನಿಸಿದರೆ ನಿವೃತ್ತಿ ಘೋಷಿಸುವುದಾಗಿಯೂ ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.