
ದುಬೈ[ಸೆ.21]: ಏಷ್ಯಾಕಪ್’ನ ಸೂಪರ್ 4 ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ ಆರಂಭಿಕ ಆಘಾತ ಎದುರಿಸಿದ್ದು, ಕೇವಲ 16 ರನ್ ಕಲೆಹಾಕುವಷ್ಟರಲ್ಲೇ ಬಾಂಗ್ಲಾ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದ್ದಾರೆ.
ಭಾರತ-ಬಾಂಗ್ಲಾದೇಶ ನಡುವಿನ ಸೂಪರ್ 4 ಹಂತದ ಪಂದ್ಯದಲ್ಲಿ ಮೊದಲ ಆರು ಓವರ್ ಮುಕ್ತಾಯವಾಗುವ ಮುನ್ನ ಬಾಂಗ್ಲಾದೇಶದ ಆರಂಭಿಕರಾದ ಲಿಟನ್ ದಾಸ್ ಹಾಗೂ ನಜ್ಮುಲ್ ಹುಸೇನ್ ತಲಾ 7 ರನ್ ಬಾರಿಸಿ ಕ್ರಮವಾಗಿ ಭುವಿ ಹಾಗೂ ಬುಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
ಬಾಂಗ್ಲಾದೇಶ ಮಂದಗತಿಯ ಆರಂಭ ಪಡೆದಿದ್ದು ಮೊದಲ 8 ಓವರ್ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 26 ರನ್ ಬಾರಿಸಿದೆ. ಇದೀಗ ಶಕೀಬ್ ಅಲ್ ಹಸನ್ ಹಾಗೂ ಮುಷ್ಫಿಕರ್ ರಹೀಮ್ ಬ್ಯಾಟಿಂಗ್ ನಡೆಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.