
ಬೆಂಗಳೂರು[ಸೆ.29]: ಬಾಂಗ್ಲಾದೇಶವನ್ನು ಕೊನೆಯ ಎಸೆತದಲ್ಲಿ ಮಣಿಸಿದ ರೋಹಿತ್ ಶರ್ಮಾ 14ನೇ ಆವೃತ್ತಿಯ ಏಷ್ಯಾಕಪ್’ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರಂಭದಿಂದಲೂ ರೋಚಕತೆಯಿಂದ ಕೂಡಿದ್ದ ಪಂದ್ಯವನ್ನು ಜಯಿಸುವ ಮೂಲಕ ಟೀಂ ಇಂಡಿಯಾ, ತನ್ನ ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡುವಲ್ಲಿ ಯಶಸ್ವಿಯಾಯಿತು.
ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 222 ರನ್’ಗಳಿಗೆ ಸರ್ವಪತನ ಕಂಡಿತು. ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವ ಮುನ್ಸೂಚನೆ ನೀಡಿತು. ತಂಡದ ಮೊತ್ತ 35 ರನ್’ಗಳಾಗಿದ್ದಾಗ ನಜ್ಮುಲ್ ಇಸ್ಲಾಮ್ ಬೌಲಿಂಗ್’ನಲ್ಲಿ ಸೌಮ್ಯ ಸರ್ಕಾರ್’ಗೆ ಶಿಖರ್ ಧವನ್ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಧವನ್ ವಿಕೆಟ್ ಪಡೆಯುತ್ತಿದ್ದಂತೆ ನಜ್ಮುಲ್ ನಾಗಿಣಿ ಡ್ಯಾನ್ ಮಾಡಿ ವ್ಯಂಗ್ಯದ ವಿದಾಯ ಕೋರಿದರು.
ಇದೀಗ ನಜ್ಮುಲ್ ನಾಗಿಣಿ ಡ್ಯಾನ್ಸ್ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ನಾಗಿಣಿ ಡ್ಯಾನ್ಸ್ ತಾತ್ಕಾಲಿಕ ಆದರೆ ನಿರಾಸೆ ಖಚಿತ ಎಂದು ಟ್ವೀಟ್ ಮಾಡುವ ಮೂಲಕ ಬಾಂಗ್ಲಾ ಕ್ರಿಕೆಟಿಗರ ಕಾಲೆಳೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.