
ದುಬೈ(ಸೆ.25): ಎಂ.ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ, ಅಫ್ಘಾನಿಸ್ತಾನ ವಿರುದ್ಧದ ಏಷ್ಯಾಕಪ್ ಪಂದ್ಯದ ಗೆಲುವಿಗಾಗಿ ಹೋರಾಟ ನಡೆಸುತ್ತಿದೆ. ಗೆಲುವಿಗೆ 253 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡಿದೆ.
ಆರಂಭದಲ್ಲಿ ಭಾರತ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಅಂಬಾಟಿ ರಾಯುಡು ಡೀಸೆಂಟ್ ಒಪನಿಂಗ್ ನೀಡಿದರು. ಈ ಜೋಡಿ ಮೊದಲ ವಿಕೆಟ್ಗೆ 110 ರನ್ ಜೊತೆಯಾಟ ನೀಡಿದರು.
ಕೆಎಲ್ ರಾಹುಲ್ ಹಾಗೂ ಅಂಬಾಟಿ ರಾಯುಡು ಅರ್ಧಶತಕ ಸಿಡಿಸಿ ಮಿಂಚಿದರು. ರಾಯುಡು 57 ರನ್ ಸಿಡಿಸಿ ಔಟಾದರೆ, ರಾಹುಲ್ 60 ರನ್ ಸಿಡಿಸಿ ನಿರ್ಗಮಿಸಿದರು. ನಾಯಕನಾಗಿ ಮತ್ತೆ ಕಣಕ್ಕಿಳಿದ ಎಂ.ಎಸ್ ಧೋನಿ ಕೇವಲ 8 ರನ್ ಸಿಡಿಸಿ ನಿರಾಸೆ ಅನುಭವಿಸಿದರು.
ಸೂಪರ್ 4 ಹಂತದ ಅಂತಿಮ ಪಂದ್ಯದಲ್ಲಿ ಅವಕಾಶ ಪಡೆದ ಮನೀಶ್ ಪಾಂಡೆ ನಿರಾಸೆ ಮೂಡಿಸಿದರು. ಪಾಂಡೆ 8 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ದಿನೇಶ್ ಕಾರ್ತಿಕ್ ಹಾಗೂ ಕೇದಾರ್ ಜಾದವ್ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತು.
ಜಾದವ್ 19 ರನ್ ಸಿಡಿಸಿ ರನೌಟ್ಗೆ ಬಲಿಯಾದರು. ದಿನೇಶ್ ಕಾರ್ತಿಕ್ 44 ರನ್ ಸಿಡಿಸಿ ನಿರ್ಗಮಿಸಿದರು. ಸದ್ಯ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 207 ರನ್ ಸಿಡಿಸಿದೆ. ಗೆಲುವಿಗೆ ಇನ್ನು 46 ರನ್ಗಳ ಅವಶ್ಯಕತೆ ಇದೆ.
ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಮೊಹಮ್ಮದ್ ಶೆಹಝಾದ್ ಭರ್ಜರಿ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 252 ರನ್ ಸಿಡಿಸಿತು. ಮೊಹಮ್ಮದ್ ನಬಿ 62 ರನ್ ಕಾಣಿಕೆ ನೀಡಿದರು. ಭಾರತದ ಪರ ರವೀಂದ್ರ ಜಡೇಜಾ 3 ವಿಕೆಟ್ ಪಡೆದು ಮಿಂಚಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.