
ದುಬೈ(ಸೆ.18): ಭಾರತ ವಿರುದ್ಧದ ಏಷ್ಯಾಕಪ್ ಟೂರ್ನಿ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದೆ. ಮಹತ್ವದ ಹೋರಾಟಕ್ಕೆಟೀಂ ಇಂಡಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿದೆ.
ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಖಲೀಲ್ ಅಹಮ್ಮದ್ ಹಾಗೂ ವೇಗಿ ಶಾರ್ದೂಲ್ ಠಾಕೂರ್ ಬದಲು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ಕಮ್ಬ್ಯಾಕ್ ಮಾಡಿದ್ದಾರೆ. ಈ ಮೂಲಕ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗವನ್ನ ಬಲಿಷ್ಠಗೊಳಿಸಿದೆ.
ಪಾಕಿಸ್ತಾನ ತಂಡದಲ್ಲಿ ಯಾವದೇ ಬದಲಾವಣೆ ಮಾಡಿಲ್ಲ. ಹಾಂಕಾಂಗ್ ವಿರುದ್ಧ ಕಣಕ್ಕಿಳಿದ ತಂಡವೇ ಭಾರತ ವಿರುದ್ದ ಆಡುತ್ತಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಬಲಿಷ್ಠವಾಗಿರುವ ಪಾಕಿಸ್ತಾನ ಇದೀಗ ಭಾರತಕ್ಕೆ ಕಠಿಣ ಸವಾಲು ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.