ನ್ಯೂಜಿಲೆಂಡ್‌ಗೆ ಆತಿಥ್ಯ ಕಳೆದುಕೊಳ್ಳುವ ಆತಂಕ!

Published : Mar 17, 2019, 04:27 PM IST
ನ್ಯೂಜಿಲೆಂಡ್‌ಗೆ ಆತಿಥ್ಯ ಕಳೆದುಕೊಳ್ಳುವ ಆತಂಕ!

ಸಾರಾಂಶ

ಮಸೀದಿ ಮೇಲಿನ ಗುಂಡಿನ ದಾಳಿಯಲ್ಲಿ ಸುಮಾರು 50 ಮಂದಿ ಮೃತಪಟ್ಟಿದ್ದರು. ಬಾಂಗ್ಲಾದೇಶ ಕ್ರಿಕೆಟಿಗರು ಪ್ರವಾಸ ಮೊಟಕುಗೊಳಿಸಿ ತವರಿಗೆ ಮರಳಿದೆ.

ಆಕ್ಲೆಂಡ್‌[ಮಾ.17]: ಕ್ರೈಸ್ಟ್‌ಚರ್ಚ್’ನ ಮಸೀದಿಯಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ನ್ಯೂಜಿಲೆಂಡ್‌ ‘ಸುರಕ್ಷತಾ ಧಾಮ’ವಾಗಿ ಉಳಿದಿಲ್ಲ. ಜಾಗತಿಕ ಮಟ್ಟದ ಪಂದ್ಯಾವಳಿಗಳ ಆತಿಥ್ಯ ಹಕ್ಕು ಕಳೆದುಕೊಳ್ಳುವ ಆತಂಕ ಶುರುವಾಗಿದೆ ಎಂದು ನ್ಯೂಜಿಲೆಂಡ್‌ ಕ್ರಿಕೆಟ್‌ ಸಂಸ್ಥೆಯ ಸಿಇಒ ಡೇವಿಡ್‌ ವೈಟ್‌ ತಿಳಿಸಿದ್ದಾರೆ.

ಮಸೀದಿಯಲ್ಲಿ ಶೂಟೌಟ್: ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗರು..! 

ದಾಳಿಯಲ್ಲಿ ಬಾಂಗ್ಲಾದೇಶ ಕ್ರಿಕೆಟಿಗರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದರು. ‘ಇದು ಆಘಾತಕಾರಿ ಘಟನೆ. ಅಂತಾರಾಷ್ಟ್ರೀಯ ಕ್ರೀಡಾತಿಥ್ಯದ ವಿಚಾರದಲ್ಲಿ ನಮ್ಮ ಮೇಲಿನ ಅಭಿಪ್ರಾಯವೇ ಬದಲಾಗಲಿದೆ. ನಮ್ಮಲ್ಲಿನ ಭದ್ರತಾ ವ್ಯವಸ್ಥೆಯನ್ನು ಆಳವಾಗಿ ಪರಿಶೀಲಿಸಬೇಕಿದೆ. ಸುರಕ್ಷತಾ ಧಾಮ ಎನ್ನುವ ಹೆಗ್ಗಳಿಕೆಯನ್ನು ನಾವು ಕಳೆದುಕೊಂಡಿದ್ದೇವೆ’ ಎಂದು ಡೇವಿಡ್‌ ಹೇಳಿದ್ದಾರೆ.

ನ್ಯೂಜಿಲೆಂಡ್’ನಲ್ಲಿ ಗುಂಡಿನ ದಾಳಿ: ಬೆಚ್ಚಿ ಬಿದ್ದ ಕ್ರಿಕೆಟ್ ಸಮುದಾಯ

ಮಸೀದಿ ಮೇಲಿನ ಗುಂಡಿನ ದಾಳಿಯಲ್ಲಿ ಸುಮಾರು 50 ಮಂದಿ ಮೃತಪಟ್ಟಿದ್ದರು. ಬಾಂಗ್ಲಾದೇಶ ಕ್ರಿಕೆಟಿಗರು ಪ್ರವಾಸ ಮೊಟಕುಗೊಳಿಸಿ ತವರಿಗೆ ಮರಳಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ವಿಡಿಯೋದಿಂದ ಸಾರಾ ತೆಂಡೂಲ್ಕರ್ ಟ್ರೋಲ್, ತಂದೆ ಮದ್ಯ ವಿರೋಧಿ ನಿಲುವು ನೆನಪಿಸಿದ ನೆಟ್ಟಿಗರು
ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ ಆಸೀಸ್‌ ದಿಗ್ಗಜ ಕ್ರಿಕೆಟರ್‌ ಡೇಮಿಯನ್‌ ಮಾರ್ಟಿನ್‌, ಅಪ್‌ಡೇಟ್‌ ನೀಡಿದ ಗಿಲ್‌ಕ್ರಿಸ್ಟ್‌!