
ಸಿಡ್ನಿ(ನ.10): ಮುಂದಿನ ವರ್ಷ ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ, ಭಾರತದ ನೆಲದಲ್ಲಿ ಯಶಸ್ವಿಯಾಗಲು ಸಾಕಷ್ಟು ಕಠಿಣ ಅಭ್ಯಾಸ ನಡೆಸಬೇಕಿದೆ ಎಂದು ಕಾಂಗರೂ ಪಡೆಯ ಮಾಜಿ ನಾಯಕ ಆ್ಯಂಡಂ ಗಿಲ್ಕ್ರಿಸ್ಟ್ ಕಿವಿಮಾತು ಹೇಳಿದ್ದಾರೆ.
ಕಳೆದ ಕೆಲ ವರ್ಷಗಳ ಹಿಂದಷ್ಟೇ ಟೆಸ್ಟ್ ರಂಗದಲ್ಲಿ ಅತ್ಯುತ್ತಮ ತಂಡವೆಂಬ ಹೆಗ್ಗಳಿಕೆ ಪಡೆದಿದ್ದ ಆಸ್ಟ್ರೇಲಿಯಾ ತಂಡ, ಈಗ ತನ್ನ ಸಾಮರ್ಥ್ಯಕ್ಕೆ ತಕ್ಕ ಆಟ ಆಡುತ್ತಿಲ್ಲ. ಇತ್ತೀಚೆಗೆ, ತನ್ನದೇ ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ, ಭಾರತ ವಿರುದ್ಧ ಯಶಸ್ಸು ಗಳಿಸಬೇಕಾದಲ್ಲಿ ಅದು ಈಗಿನಿಂದಲೇ ಕಠಿಣ ಪರಿಶ್ರಮ ಪಡಬೇಕೆಂದು ಗಿಲ್ಕ್ರಿಸ್ಟ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.