
ಇಫೋ(ಮಲೇಷ್ಯಾ)(ಮಾ.26): ಸುಲ್ತಾನ್ ಅಜ್ಲಾನ್ ಶಾ ಹಾಕಿ ಟೂರ್ನಿಯ ಆರಂಭಿಕ ಹಂತದಲ್ಲೇ ಭಾರತ ಒತ್ತಡಕ್ಕೆ ಸಿಲುಕಿದೆ. ಮೊದಲ ಪಂದ್ಯದಲ್ಲಿ ಜಪಾನ್ ವಿರುದ್ಧ 2-0 ಗೋಲುಗಳಿಂದ ಗೆದ್ದಿದ್ದ ಭಾರತ, 2ನೇ ಪಂದ್ಯದಲ್ಲಿ ಕೊರಿಯಾಕ್ಕೆ ಕೊನೆ ನಿಮಿಷದಲ್ಲಿ ಗೋಲು ಬಿಟ್ಟುಕೊಟ್ಟು 1-1ರ ಡ್ರಾಗೆ ತೃಪ್ತಿಪಟ್ಟಿತ್ತು.
ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ ಪಟು ನಿತಿನ್ ತಿಮ್ಮಯ್ಯ!
4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಭಾರತ, ಮಂಗಳವಾರ ನಡೆಯಲಿರುವ 3ನೇ ಪಂದ್ಯದಲ್ಲಿ ಆತಿಥೇಯ ಮಲೇಷ್ಯಾ ವಿರುದ್ಧ ಸೆಣಸಲಿದೆ. ಫೈನಲ್ಗೇರಬೇಕಿದ್ದರೆ ತಂಡ ಮುಂದಿನ ಮೂರೂ ಪಂದ್ಯಗಳನ್ನು ಗೆಲ್ಲಲೇಬೇಕಿದೆ.
ಕೊನೆ 2 ಪಂದ್ಯಗಳಲ್ಲಿ ಎದುರಾಗಲಿರುವ ಕೆನಡಾ ಹಾಗೂ ಪೋಲೆಂಡ್, ಸುಲಭ ಎದುರಾಳಿಗಳೆನಿಸಿದರೂ ಮಲೇಷ್ಯಾ ತಂಡ ಇತ್ತೀಚಿನ ವರ್ಷಗಳಲ್ಲಿ ಭಾರತಕ್ಕೆ ಹಲವು ಬಾರಿ ಆಘಾತ ನೀಡಿದೆ. ಹೀಗಾಗಿ ಈ ಪಂದ್ಯ ಮನ್ಪ್ರೀತ್ ಸಿಂಗ್ ಪಡೆಯನ್ನು ಒತ್ತಡಕ್ಕೆ ಸಿಲುಕಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.