
ನವದೆಹಲಿ(ಆ.04]: ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವ ವೀರೇಂದ್ರ ಸೆಹ್ವಾಗ್ ದಿನಕ್ಕೊಂದು ಸುದ್ದಿ ಮಾಡುತ್ತಿರುತ್ತಾರೆ.
ಇದೀಗ, ಜಾಹೀರಾತೊಂದಕ್ಕೆ ಬಾಬಾ ಅವತಾರದಲ್ಲಿ ಕಾಣಿಸಿಕೊಂಡಿರುವ ಸೆಹ್ವಾಗ್, ನನ್ನ ಆಶಿರ್ವಾದ ಯಾವಾಗಲೂ ಟೀಂ ಇಂಡಿಯಾ ಜತೆ ಇರಲಿದೆ ಎಂದು ಇನ್’ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಆಡುತ್ತಿದ್ದು, ಮೂರನೇ ದಿನದಾಟ ಮುಕ್ತಾಯಕ್ಕೆ ಭಾರತ 5 ವಿಕೆಟ್ ಕಳೆದುಕೊಂಡು 110 ರನ್ ಬಾರಿಸಿದ್ದು, ಗೆಲ್ಲಲು ಇನ್ನೂ 84 ರನ್’ಗಳ ಅವಶ್ಯಕತೆಯಿದೆ.
‘ಗುರುವನ್ನು ಆಯ್ಕೆ ಮಾಡುವಾಗ ಸರಿಯಾದವರನ್ನು ಆಯ್ಕೆ ಮಾಡಿ’ ಎಂದು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಸೆಹ್ವಾಗ್ರ ಈ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.