’ಯುವ ದಸರಾ’ ಉದ್ಘಾಟಿಸಲು PV ಸಿಂಧುವನ್ನು ಆಹ್ವಾನಿಸಿದ ಸಂಸದ ಪ್ರತಾಪ್ ಸಿಂಹ

Published : Sep 14, 2019, 04:50 PM IST
’ಯುವ ದಸರಾ’ ಉದ್ಘಾಟಿಸಲು PV ಸಿಂಧುವನ್ನು ಆಹ್ವಾನಿಸಿದ ಸಂಸದ ಪ್ರತಾಪ್ ಸಿಂಹ

ಸಾರಾಂಶ

ಇತ್ತೀಚೆಗಷ್ಟೇ ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದ ಪಿ.ವಿ. ಸಿಂಧು ಅವರಿಗೆ ಯುವ ದಸರಾ ಉದ್ಘಾಟಿಸಲು ಸಂಸದ ಪ್ರತಾಪ್ ಸಿಂಹ ಇಂದು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಹೈದರಾಬಾದ್[ಸೆ.14]: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ. ಸಿಂಧು ಈ ಬಾರಿಯ ಯುವ ದಸರಾವನ್ನು ಉದ್ಘಾಟಿಸಲಿದ್ದಾರೆ. ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಪಿ.ವಿ ಸಿಂಧು ನಿವಾಸಕ್ಕೆ ಭೇಟಿ ಕೊಟ್ಟು, ಯುವ ದಸರಾ ಉದ್ಘಾಟಿಸುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ. 

ಒಲಂಪಿಕ್‌ನಲ್ಲಿ ಚಿನ್ನ ಗೆಲ್ಲುವೆ : PV ಸಿಂಧು

ಅಕ್ಟೋಬರ್ 01ರಂದು ಮೈಸೂರಿನ ಮಹರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಈ ಕಾರ್ಯಕ್ರಮ ಉದ್ಘಾಟಿಸುವಂತೆ ಪ್ರತಾಪ್ ಸಿಂಹ ಅಧಿಕೃತ ಆಹ್ವಾನ ಪತ್ರಿಕೆ ನೀಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಯುವ ದಸರಾ ಉದ್ಘಾಟಿಸಲು ಅತಿಥಿಯಾಗಿ ಆಗಮಿಸುವಂತೆ ರಿಯೋ ಒಲಿಂಪಿಕ್ ರಜತ ಪದಕ ವಿಜೇತೆ ಸಿಂಧುಗೆ ಆಹ್ವಾನ ನೀಡಿದ್ದರು. 

ಜಿಲ್ಲಾ ಸುದ್ದಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

ಇದೀಗ ಸಂಸದ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಾಂತ್ ಅಧಿಕೃತವಾಗಿ ಭೇಟಿಯಾಗಿ ’ಯುವ ದಸರಾ’ ಉದ್ಘಾಟಿಸುವಂತೆ ಕೋರಿದ್ದಾರೆ. ಈ ಕುರಿತಂತೆ ಪ್ರತಾಪ್ ಸಿಂಹ, ಅಕ್ಟೋಬರ್ 01ರಂದು ಸಿಂಧು ಹಾಗೂ ಅವರ ಕುಟುಂಬವನ್ನು ಬರಮಾಡಿಕೊಳ್ಳಲು ಎದುರು ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಂಧು ಧನ್ಯವಾದ ಅರ್ಪಿಸಿದ್ದಾರೆ. 

ಹೈದರಾಬಾದ್’ನ ಪಿ.ವಿ ಸಿಂಧು ಇತ್ತೀಚೆಗಷ್ಟೇ ಸ್ವಿಟ್ಜರ್’ಲ್ಯಾಂಡ್’ನ ಬಾಸೆಲ್’ನಲ್ಲಿ ಮುಕ್ತಾಯವಾದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್’ಶಿಪ್’ನಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದರು. ಇದರೊಂಚಿಗೆ ಬ್ಯಾಡ್ಮಿಂಟನ್’ನಲ್ಲಿ ವಿಶ್ವ ಚಾಂಪಿಯನ್ ಆದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಗೌರವಕ್ಕೆ ಭಾಜನರಾಗಿದ್ದರು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!