
ನವದೆಹಲಿ(ಜು.26): ವಿವಾದಿತ 5 ಅಂಶಗಳನ್ನು ಹೊರತು ಪಡಿಸಿ ನ್ಯಾಯಮೂರ್ತಿ ಲೋಧಾ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಬಿಸಿಸಿಐ ಮುಂದಾಗಿದೆ.
ಇಂದು ನಡೆದ ಬಿಸಿಸಿಐನ ವಿಶೇಷ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ಬಳಿಕ ಬಿಸಿಸಿಐನ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಈ ವಿಷಯವನ್ನು ತಿಳಿಸಿದರು.
ಒಂದು ರಾಜ್ಯ ಒಂದು ಮತ, ಪದಾಧಿಕಾರಿಗಳ ವಯಸ್ಸಿನ ಮಿತಿ, ಕೂಲಿಂಗ್ ಆಫ್ ಅವಧಿ ಸೇರಿದಂತೆ ಐದು ವಿವಾದಿತ ಶಿಫಾರಸುಗಳನ್ನು ಹೊರತು ಪಡಿಸಿ ಉಳಿದ ಶಿಫಾರಸುಗಳನ್ನು ಜಾರಿಗೊಳಿಸಲು ಬಿಸಿಸಿಐನ ಪದಾಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ.
ಇನ್ನು ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳನ್ನು ಹೊರತು ಪಡಿಸಿ, ಯಾರು ಸಹ ಬಿಸಿಸಿಐನ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಬಾರದೆಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸಿಇಓ ರಾಹುಲ್ ಜೋಹ್ರಿಯನ್ನು ಸಭಾಂಗಣದಿಂದ ಹೊರಗೆ ಕಳಿಸಲಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.