
ಮುಂಬೈ(ಜ.22): ಆಸ್ಟ್ರೇಲಿಯಾ ವಿರುದ್ಧ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗಿದೆ.ಇತ್ತ ಬಿಸಿಸಿಐ ಆಸಿಸ್ ಪ್ರವಾಸಕ್ಕೆ ಅತ್ಯುತ್ತಮ ತಂಡ ಆಯ್ಕೆ ಮಾಡಿದ ಸೆಲೆಕ್ಷನ್ ಕಮಿಟಿ ಸದಸ್ಯರಿಗೆ ತಲಾ 20 ಲಕ್ಷ ರೂಪಾಯಿ ಬುಹಮಾನ ಘೋಷಿಸಿದೆ.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಅಲಭ್ಯತೆಯಿಂದ 3ನೇ ವೇಗಿ ಅನಿವಾರ್ಯ: ಕೊಹ್ಲಿ!
ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯ ಐವರಿಗೆ ಬಿಸಿಸಿಐ ತಲಾ 20 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಇಷ್ಟೇ ಅಲ್ಲ ಅತ್ಯುತ್ತಮ ತಂಡ ಆಯ್ಕೆ ಮಾಡಿ ಐತಿಹಾಸಿಕ ಗೆಲುವಿಗೆ ಕಾರಣರಾದ ಆಯ್ಕೆ ಸಮಿತಿಯನ್ನ ಸಿಒಎ ವಿನೋದ್ ರೈ ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ಸೆಹ್ವಾಗ್ ದಾಖಲೆ ಪುಡಿ ಮಾಡಲು ಸಜ್ಜಾದ ಕೊಹ್ಲಿ!
ಇಂಜುರಿ, ಹಲವು ಕ್ರಿಕೆಟಿಗ ಅಲಭ್ಯತೆ ಸೇರಿದಂತೆ ಹಲವು ಸಮಸ್ಯೆಯನ್ನ ಆಯ್ಕೆ ಸಮಿತಿ ಎದುರಿಸಿತ್ತು. ಇಷ್ಟಾದರೂ ಅತ್ಯುತ್ತಮ ತಂಡವನ್ನ ಆಯ್ಕೆ ಮಾಡಿದೆ. ಪೃಥ್ವಿ ಶಾ ಇಂಜುರಿ, ಕೆಎಲ್ ರಾಹುಲ್ ಮುರಳಿ ವಿಜಯ್ ಫಾರ್ಮ್ ಸಮಸ್ಯೆ ಎದುರಿಸಿದ್ದರು. ಇದರ ನಡುವೆ ಪ್ರತಿಭಾನ್ವಿತರಿಗೆ ಅವಕಾಶ ಮಾಡಿಕೊಟ್ಟ ಆಯ್ಕೆ ಸಮಿತಿ ಕಾರ್ಯ ನಿಜಕ್ಕೂ ಮೆಚ್ಚಲೇ ಬೇಕು ಎಂದು ವಿನೋದ್ ರೈ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.