ಬಿಸಿಸಿಐ ಪ್ರಧಾನ ವ್ಯವಸ್ಥಾಪಕರಾಗಿ ಸಾಬಾ ಕರೀಂ ನೇಮಕ

Published : Dec 23, 2017, 07:34 PM ISTUpdated : Apr 11, 2018, 01:03 PM IST
ಬಿಸಿಸಿಐ ಪ್ರಧಾನ ವ್ಯವಸ್ಥಾಪಕರಾಗಿ ಸಾಬಾ ಕರೀಂ ನೇಮಕ

ಸಾರಾಂಶ

ಸಾಬಾ ಕರೀಂ ಕ್ರಿಕೆಟ್ ಬದುಕು ದುರಂತ ಅಂತ್ಯ ಕಂಡಿತ್ತು. 2000ನೇ ಇಸವಿಯಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಅನಿಲ್ ಕುಂಬ್ಳೆ ಬೌಲಿಂಗ್ ವೇಳೆ ಕೀಪಿಂಗ್ ಮಾಡುತ್ತಿದ್ದ ಕರೀಂ ಕಣ್ಣಿಗೆ ಗಾಯ ಮಾಡಿಕೊಂಡು ಕ್ರಿಕೆಟ್'ನಿಂದ ದೂರ ಉಳಿಯಬೇಕಾಗಿ ಬಂದಿತ್ತು. ಆದರೆ ಇದೀಗ ಸಾಬಾ ಕರೀಂ ಆಯ್ಕೆ ಟೀಂ ಇಂಡಿಯಾಗೆ ಸೇವೆ ಸಲ್ಲಿಸಲು ಮತ್ತೊಂದು ಅವಕಾಶ ಮಾಡಿಕೊಟ್ಟಂತೆ ಆಗಿದೆ.

ನವದೆಹಲಿ(ಡಿ.23): ಟೀಂ ಇಂಡಿಯಾ ಮಾಜಿ ವಿಕೆಟ್ ಕೀಪರ್ ಸಾಬಾ ಕರೀಂ ಅವರನ್ನು ಕ್ರಿಕೆಟ್ ಕಾರ್ಯಾಚರಣೆಯ ಪ್ರಧಾನ ವ್ಯವಸ್ಥಾಪಕರನ್ನಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೇಮಿಸಿದೆ. ಸಾಬಾ ಕರೀಂ 34 ಏಕದಿನ ಹಾಗೂ 1 ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ.

ಸೆಪ್ಟೆಂಬರ್'ನಲ್ಲಿ ಡಾ. ಎಂ.ವಿ. ಶ್ರೀಧರ್ ಈ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಈ ಹುದ್ದೆ ಖಾಲಿ ಉಳಿದಿತ್ತು. 50 ರ ವಯೋಮಾನದ ಸಾಬಾ ಕರೀಂ ಜನವರಿ 1, 2018 ರಿಂದ ಅಧಿಕಾರ ಸ್ವೀಕರಿಸಲಿದ್ದು, ಬಿಸಿಸಿಐ ಸಿಇಒ ರಾಹುಲ್ ಜೂಹ್ರಿ ಅವರಿಗೆ ವರದಿ ಮಾಡಿಕೊಳ್ಳಲಿದ್ದಾರೆ.

ಸಾಬಾ ಕರೀಂ ಕ್ರಿಕೆಟ್ ಬದುಕು ದುರಂತ ಅಂತ್ಯ ಕಂಡಿತ್ತು. 2000ನೇ ಇಸವಿಯಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಅನಿಲ್ ಕುಂಬ್ಳೆ ಬೌಲಿಂಗ್ ವೇಳೆ ಕೀಪಿಂಗ್ ಮಾಡುತ್ತಿದ್ದ ಕರೀಂ ಕಣ್ಣಿಗೆ ಗಾಯ ಮಾಡಿಕೊಂಡು ಕ್ರಿಕೆಟ್'ನಿಂದ ದೂರ ಉಳಿಯಬೇಕಾಗಿ ಬಂದಿತ್ತು. ಆದರೆ ಇದೀಗ ಸಾಬಾ ಕರೀಂ ಆಯ್ಕೆ ಟೀಂ ಇಂಡಿಯಾಗೆ ಸೇವೆ ಸಲ್ಲಿಸಲು ಮತ್ತೊಂದು ಅವಕಾಶ ಮಾಡಿಕೊಟ್ಟಂತೆ ಆಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಕಾರಣದಿಂದ ಕ್ರಿಕೆಟ್‌ಗೆ ಗುಡ್ ಬೈ ಹೇಳಲು ಮುಂದಾಗಿದ್ದ ಶ್ರೇಯಾಂಕಾ ಪಾಟೀಲ್! ಕೊನೆಗೆ ಮನಸ್ಸು ಬದಲಿಸಿದ್ದು ಹೇಗೆ?
FIFA World Cup 2026 ಮೈದಾನದಲ್ಲೂ ಮಿಂಚು, ಮೈದಾನದ ಹೊರಗೂ ಮಾದರಿ: ಜಪಾನ್ ವಿಶ್ವದ ಗಮನ ಸೆಳೆದದ್ದು ಹೇಗೆ?