ಶ್ರೀಶಾಂತ್ ಆಸೆಗೆ ಮತ್ತೆ ತಣ್ಣೀರೆರಚಿದ ಬಿಸಿಸಿಐ...!

Published : Sep 19, 2017, 03:46 PM ISTUpdated : Apr 11, 2018, 12:57 PM IST
ಶ್ರೀಶಾಂತ್ ಆಸೆಗೆ ಮತ್ತೆ ತಣ್ಣೀರೆರಚಿದ ಬಿಸಿಸಿಐ...!

ಸಾರಾಂಶ

2013ರ ಐಪಿಎಲ್ ವೇಳೆ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಶ್ರೀಶಾಂತ್ ಸೇರಿದಂತೆ ಮತ್ತಿಬ್ಬರು ಆಟಗಾರರಾದ ಅಜಿತ್ ಚಾಂಡೀಲಾ ಹಾಗೂ ಅಂಕಿತ್ ಚೌಹಾಣ್ ಅವರ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿದೆ.

ನವದೆಹಲಿ(ಸೆ.19): ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಶ್ರೀಶಾಂತ್ ವಿರುದ್ಧ ಹೇರಿದ್ದ ಆಜೀವ ನಿಷೇಧವನ್ನು ತೆರವುಗೊಳಿಸಿ ಕೇರಳ ಹೈಕೋರ್ಟ್ ನೀಡಿದ್ದ ತೀರ್ಪನ್ನು ಬಿಸಿಸಿಐ ಪ್ರಶ್ನಿಸಿ ಅರ್ಜಿ ಸಲ್ಲಿಸಿದೆ. ಈ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್'ಗೆ ಮರಳಬೇಕೆನ್ನುವ ಕೇರಳ ವೇಗಿಯ ಕನಸಿಗೆ ಬಿಸಿಸಿಐ ತಣ್ಣೀರೆರಚಿದೆ.

2013ರ ಐಪಿಎಲ್‌'ನಲ್ಲಿ ರಾಜಸ್ಥಾನ ರಾಯಲ್ಸ್‌'ನ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದರು ಎನ್ನುವ ಆರೋಪದ ಮೇಲೆ ಬಿಸಿಸಿಐ ಅವರ ವಿರುದ್ಧ ಆಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ಕೇರಳ ಹೈಕೋರ್ಟ್ ಶ್ರೀಶಾಂತ್ ಪರವಾಗಿ ತೀರ್ಪು ನೀಡಿತ್ತು.

2013ರ ಐಪಿಎಲ್ ವೇಳೆ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಶ್ರೀಶಾಂತ್ ಸೇರಿದಂತೆ ಮತ್ತಿಬ್ಬರು ಆಟಗಾರರಾದ ಅಜಿತ್ ಚಾಂಡೀಲಾ ಹಾಗೂ ಅಂಕಿತ್ ಚೌಹಾಣ್ ಅವರ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಆತ ಊಟಿಗೆ ಕರೆದುಕೊಂಡು ಹೋಗಿ..': ಅಪ್ರಾಪ್ತೆ ಮೇಲೆ ಆರ್‌ಸಿಬಿ ಆಟಗಾರ ಲೈಂಗಿಕ ದೌರ್ಜನ್ಯ, ಬೇಲ್ ಕ್ಯಾನ್ಸಲ್! ಶುರುವಾಯ್ತು ಬಂಧನ ಭೀತಿ
ವಿಜಯ್ ಹಜಾರೆ ಟ್ರೋಫಿ: ದೇಶಿ ಕ್ರಿಕೆಟಲ್ಲಿ ರನ್‌ ಮಳೆ, ದಾಖಲೆಗಳ ಪ್ರವಾಸ; ಮೊದಲ ದಿನವೇ 22 ಶತಕ ದಾಖಲು!