ಎನ್'ಸಿಎಗೆ ರಾಜ್ಯದಿಂದ ಮತ್ತೆ 15 ಎಕರೆ ಮಂಜೂರು

Published : Sep 02, 2017, 04:08 PM ISTUpdated : Apr 11, 2018, 12:46 PM IST
ಎನ್'ಸಿಎಗೆ ರಾಜ್ಯದಿಂದ ಮತ್ತೆ 15 ಎಕರೆ ಮಂಜೂರು

ಸಾರಾಂಶ

ಹೆಚ್ಚುವರಿ 15 ಎಕರೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಬಿಸಿಸಿಐ ಪರವಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ.

ಬೆಂಗಳೂರು(ಸೆ.02): ದೇವನಹಳ್ಳಿ ಬಳಿ ನೂತನವಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ನಿರ್ಮಿಸಲು ಬಿಸಿಸಿಐಗೆ ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚುವರಿ 15 ಎಕರೆ ಜಾಗ ಮಂಜೂರು ಮಾಡಿದೆ.

12 ವರ್ಷಗಳ ಹಿಂದೆಯೇ ಬಿಸಿಸಿಐ ಹಣ ಪಾವತಿಸಿದ್ದರೂ ಕೆಲ ತಿಂಗಳುಗಳ ಹಿಂದಷ್ಟೇ ರಾಜ್ಯ ಸರ್ಕಾರ 25 ಎಕರೆ ಜಾಗ ನೀಡಿತ್ತು.ಬಿಸಿಸಿಐ ಹೆಚ್ಚುವರಿ 25 ಎಕರೆ ನೀಡುವಂತೆ ಕೇಳಿಕೊಂಡಿತ್ತು.

ಹೆಚ್ಚುವರಿ 15 ಎಕರೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಬಿಸಿಸಿಐ ಪರವಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ.

ಇದೀಗ ಒಂದೇ ಕಡೆ ಒಟ್ಟು 40 ಎಕರೆ ಜಾಗ ದೊರೆತಿದ್ದು, ವಿಶ್ವ ದರ್ಜೆ ಮಟ್ಟದ ಎನ್'ಸಿಎ ನಿರ್ಮಿಸುವುದಾಗಿ ಅಮಿತಾಭ್ ಚೌಧರಿ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

WPLನ ಹೊಸ ತಾರೆ: ಯಾರು ಈ 16ರ ಹರೆಯದ ಚೋಟಿ ಶಫಾಲಿ
ಧನಶ್ರೀ ವರ್ಮಾ ಜತೆಗಿನ ವಿಚ್ಛೇದನದ ಬಳಿಕ ಯಜುವೇಂದ್ರ ಚಾಹಲ್‌ಗೆ ಇನ್ನೊಂದು ಆಘಾತ!