ಬಿಸಿಸಿಐಗೆ ನೂತನ ಆಡಳಿತ ಮಂಡಳಿ ರಚಿಸಿದ ಸುಪ್ರೀಂ

Published : Jan 30, 2017, 12:48 PM ISTUpdated : Apr 11, 2018, 12:35 PM IST
ಬಿಸಿಸಿಐಗೆ ನೂತನ ಆಡಳಿತ ಮಂಡಳಿ ರಚಿಸಿದ ಸುಪ್ರೀಂ

ಸಾರಾಂಶ

ಕ್ರಿಕೆಟ್ ಸಂಸ್ಥೆಗೆ ಹೊಸದಾಗಿ ಚುನಾವಣೆ ನಡೆಯುವವರೆಗೂ ಈ ನಾಲ್ವರು ಸದಸ್ಯರನ್ನೊಳಗೊಂಡ ತಂಡ ಆಡಳಿತ ನಡೆಸಲಿದೆ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ನವದೆಹಲಿ(ಜ.30): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ನೂತನ ಆಡಳಿತ ಮಂಡಳಿಯನ್ನು ಸುಪ್ರೀಂ ಕೋರ್ಟ್ ರಚಿಸಿದ್ದು, ಮಾಜಿ ಮಹಾಲೆಕ್ಕಪರಿಶೋಧಕ ವಿನೋದ್ ರೈ ಅವರನ್ನು ಬಿಸಿಸಿಐನ ತಾತ್ಕಾಲಿಕ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ನಾಲ್ವರು ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯನ್ನು ರಚಿಸಿದ್ದು ಖ್ಯಾತ ಅಂಕಣಕಾರ ರಾಮಚಂದ್ರ ಗುಹಾ, ಮಾಜಿ ಕ್ರಿಕೆಟಿಗ ಡಯಾನಾ ಎಡುಲ್ಜಿ, ಹಾಗೂ ಐಡಿಎಫ್'ಸಿಯ ಕಾರ್ಯನಿರ್ವಾಹಕಾಧಿಕಾರಿ ವಿಕ್ರಂ ಲಿಮಾಯೆ ನೇಮಕವಾಗಿದ್ದಾರೆ.

ಲೋಧಾ ಸಮಿತಿಯ ಶಿಫಾರಸುಗಳನ್ನು ಅನುಷ್ಟಾನಗೊಳಿಸಲು ಹಾಗೂ ಬಿಸಿಸಿಐ ವ್ಯವಹಾರಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್, ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಕಾರ್ಯದರ್ಶಿ ಅಜಯ್ ಶಿರ್ಕೆಯನ್ನು ವಜಾಗೊಳಿಸಿತ್ತು.

ಕ್ರಿಕೆಟ್ ಸಂಸ್ಥೆಗೆ ಹೊಸದಾಗಿ ಚುನಾವಣೆ ನಡೆಯುವವರೆಗೂ ಈ ನಾಲ್ವರು ಸದಸ್ಯರನ್ನೊಳಗೊಂಡ ತಂಡ ಆಡಳಿತ ನಡೆಸಲಿದೆ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?