
ಕೊಚ್ಚಿ(ಏ.19): ದಿಲ್ಲಿ ಉಚ್ಚ ನ್ಯಾಯಾಲಯ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದ್ದರೂ ಶ್ರೀಶಾಂತ್ ಮೇಲೆ ಹೇರಿರುವ ಜೀವಾವಧಿ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಕೇರಳ ಹೈಕೋರ್ಟ್'ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಶ್ರೀಶಾಂತ್ ಕ್ರಿಕೆಟ್ ಕನಸು ಬಹುತೇಕ ಕಮರಿದಂತಾಗಿದೆ.
ನಿಷೇಧ ತೆರವುಗೊಳಿಸುವಂತೆ ಶ್ರೀಶಾಂತ್ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿದ ಬಿಸಿಸಿಐ, "ನ್ಯಾಯಾಲಯ ಅವರನ್ನು ದೋಷಮುಕ್ತಗೊಳಿಸಿದ್ದರೂ ಕ್ರಿಕೆಟ್ ಮಂಡಳಿಯ ಆಂತರಿಕ ಸಮಿತಿ ಅದಕ್ಕೆ ಒಪ್ಪುವುದಿಲ್ಲ. ಮಂಡಳಿಯ ನಿಯಮಗಳನ್ನು ಉಲ್ಲಂಘಿಸುವವರನ್ನು ಸಹಿಸಿಕೊಳ್ಳಲು ಸಹಿಸಿಕೊಳ್ಳಲಾಗದು" ಎಂದು ತಿಳಿಸಿದೆ.
ರಾಜಸ್ತಾನ ರಾಯಲ್ಸ್ ತಂಡದ ಆಟಗಾರರರಾಗಿದ್ದ ಶ್ರೀಶಾಂತ್ 2013ರ ಐಪಿಎಲ್ ವೇಳೆ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ನಿಷೇಧಕ್ಕೆ ಗುರಿಯಾಗಿದ್ದರು. ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ದಿಲ್ಲಿ ನ್ಯಾಯಾಲಯ ಕೇರಳದ ಕ್ರಿಕೆಟಿಗನನ್ನು ದೋಷಮುಕ್ತಗೊಳಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.