
ಮುಂಬೈ(ಜ.25): ಖಾಸಗಿ ಟೀವಿ ಶೋನಲ್ಲಿ ಮಹಿಳೆಯರ ಕುರಿತು ಅಸಭ್ಯ ಹೇಳಿಕೆಯಿಂದ ಟೀಂ ಇಂಡಿಯಾದಿಂದ ಅಮಾನತಾಗಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಎಲ್.ರಾಹುಲ ಮೇಲಿನ ಶಿಕ್ಷೆಯನ್ನ ಹಿಂಪಡೆಯಲಾಗಿದೆ. ಬಿಸಿಸಿಐ ಆಡಳಿತ ಸಮಿತಿ(COA)ನಿರ್ಧಾರ ಬೆನ್ನಲ್ಲೇ ಟೀಂ ಇಂಡಿಯಾ ಆಯ್ಕೆ ಸಮಿತಿ ಇಬ್ಬರ ಆಯ್ಕೆ ನಡೆಸಿದೆ.
ಇದನ್ನೂ ಓದಿ: ಬೇಷರತ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ, ರಾಹುಲ್
ನ್ಯೂಜಿಲೆಂಡ್ ವಿರುದ್ಧದ ಇನ್ನುಳಿದ ಏಕದಿನ ಹಾಗೂ ಟಿ20 ಸರಣಿಗೆ ಆಲ್ರೌಂಡರ್ ಪಾಂಡ್ಯರನ್ನ ಆಯ್ಕೆ ಮಾಡಲಾಗಿದ್ದರೆ, ಇತ್ತರ ಕಳಪೆ ಫಾರ್ಮ್ನಲ್ಲಿರುವ ರಾಹುಲ್, ಭಾರತ ಎ ತಂಡಕ್ಕೆ ಆಯ್ಕೆಮಾಡಲಾಗಿದೆ. ಶೀಘ್ರದಲ್ಲೇ ಪಾಂಡ್ಯ ನ್ಯೂಜಿಲೆಂಡ್ಗೆ ತೆರಳಲಿದ್ದಾರೆ. ತಿರುವನಂತಪುರಂದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್ ವಿರುದ್ದದ ಇನ್ನುಳಿದ 3 ಏಕದಿನ ಪಂದ್ಯದಲ್ಲಿ ರಾಹುಲ್ ಭಾರತ ಎ ತಂಡವನ್ನ ಪ್ರತಿನಿಧಿಸಲಿದ್ದಾರೆ.
ಇದನ್ನೂ ಓದಿ: ಅಮಾನತುಗೊಂಡಿದ್ದ ಪಾಂಡ್ಯ-ರಾಹುಲ್ ನಿರಾಳ!
ಕಾಫಿ ವಿಥ್ ಕರಣ್ ಖಾಸಗಿ ಟೀವಿ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹೀಗಾಗಿ ಇಬ್ಬರಿಗೂ ಅಮಾನತು ಶಿಕ್ಷೆ ನೀಡಲಾಗಿತ್ತು. ಇದೀಗ ಬಿಸಿಸಿಐ ಆಡಳಿತ ಸಮಿತಿ ಇವರ ಮೇಲಿನ ಅಮಾತು ಶಿಕ್ಷೆಯನ್ನು ತನಿಖೆ ಪೂರ್ಣಗೊಳ್ಳುವವರಿಗೆ ಹಿಂಪಡೆದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.