
ನವದೆಹಲಿ(ಅ.25): ನಿಯಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ 2011ರಲ್ಲಿ ಐಪಿಎಲ್ ಪಂದ್ಯಾವಳಿಯಿಂದ ಕೇರಳದ ಕೊಚ್ಚಿ ಟಸ್ಕರ್ಸ್ ತಂಡವನ್ನು ವಜಾಗೊಳಿಸಿದ್ದ ಪ್ರಕರಣ ಇದೀಗ ಅಂತಿಮ ಘಟ್ಟ ತಲುಪಿದ್ದು, ಕೊಚ್ಚಿ ತಂಡದ ಫ್ರಾಂಚೈಸಿಗಳಿಗೆ ₹ 800 ಕೋಟಿಗೂ ಅಧಿಕ ಪರಿಹಾರ ನೀಡಲೇಬೇಕಾದ ಸ್ಥಿತಿಗೆ ಬಿಸಿಸಿಐ ತಲುಪಿದೆ.
ತಂಡವನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಕೊಚ್ಚಿ ತಂಡ ನ್ಯಾಯಾಲಯದ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಿವೃತ್ತ ನ್ಯಾ. ಲಹೋಟಿ ನೇತೃತ್ವದ
ಸಮಿತಿ, ಕೊಚ್ಚಿ ತಂಡದ ಮಾಲೀಕರಿಗೆ ₹550 ಕೋಟಿ ಪರಿಹಾರ ನೀಡುವಂತೆ ಸೂಚಿಸಿತ್ತು. ಒಂದೊಮ್ಮೆ ಪರಿಹಾರ ನೀಡುವಲ್ಲಿ ವಿಫಲವಾದರೆ ವರ್ಷಕ್ಕೆ ಶೇ.18ರಷ್ಟು ದಂಡ ತೆರಬೇಕೆಂದು ಎಚ್ಚರಿಸಿತ್ತು.
ಕಳೆದೆರಡು ವರ್ಷಗಳಲ್ಲಿ ಬಿಸಿಸಿಐ ಕೊಚ್ಚಿ ಟಸ್ಕರ್ಸ್ ತಂಡಕ್ಕೆ ಪರಹಾರವನ್ನೂ ನೀಡಿಲ್ಲ, ಹಾಗೆಯೇ ಐಪಿಎಲ್'ಗೂ ಸೇರಿಸಿಕೊಂಡಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.