
ಬೆಂಗಳೂರು(ಆ.20]: ಭಾರತ ‘ಎ’, ಭಾರತ ‘ಬಿ’, ಆಸ್ಪ್ರೇಲಿಯಾ ‘ಎ’ ಹಾಗೂ ದ.ಆಫ್ರಿಕಾ ‘ಬಿ’ ತಂಡಗಳನ್ನೊಳಗೊಂಡ ಚತುಷ್ಕೋನ ಸರಣಿ, ಮಳೆಯಿಂದಾಗಿ ವಿಜಯವಾಡದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.
ಆ.17ರಂದು ಟೂರ್ನಿ ಆರಂಭಗೊಳ್ಳಬೇಕಿತ್ತು. ಆದರೆ ಮಳೆಯಿಂದಾಗಿ ಟೂರ್ನಿ ಆರಂಭಗೊಳ್ಳಲು ಸಾಧ್ಯವಾಗಲಿಲ್ಲ. ಸತತ 4 ಪಂದ್ಯಗಳು ರದ್ದಾದ ಕಾರಣ, ಟೂರ್ನಿಯನ್ನು ಸ್ಥಳಾಂತರಗೊಳಿಸಲು ನಿರ್ಧರಿಸಲಾಯಿತು.
ಆ.23, 25 ಹಾಗೂ 27ರಂದು ಇನ್ನುಳಿದ ಲೀಗ್ ಹಂತದ ಪಂದ್ಯಗಳಿಗೆ ಬೆಂಗಳೂರು ಆತಿಥ್ಯ ನೀಡಲಿದ್ದು, ಆ.29ರಂದು ಫೈನಲ್ ಪಂದ್ಯ ನಡೆಯಲಿದೆ. ಕೆಲ ಪಂದ್ಯಗಳು ನೇರ ಪ್ರಸಾರಗೊಳ್ಳಲಿರುವ ಕಾರಣ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.