ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ: ಐಸಿಸಿ

Published : Feb 24, 2019, 04:32 PM IST
ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ: ಐಸಿಸಿ

ಸಾರಾಂಶ

‘ಆಟಗಾರರ ಸುರಕ್ಷತೆ ಹಾಗೂ ಭದ್ರತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಭದ್ರತೆಗೆ ಸಿದ್ಧಪಡಿಸಿರುವ ಯೋಜನೆಗಳನ್ನು ಬಿಸಿಸಿಐಗೆ ವಿವರಿಸುತ್ತೇವೆ. ಬಿಸಿಸಿಐ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಲಿ. ಮತ್ತಿನ್ಯಾವುದೇ ವ್ಯವಸ್ಥೆ ಅಗತ್ಯವಿದ್ದರೆ ಕಲ್ಪಿಸುತ್ತೇವೆ. ಎಲ್ಲಾ ತಂಡಗಳಿಗೂ ಸೂಕ್ತ ಭದ್ರತೆ ನೀಡಲಾಗುವುದು’ ಎಂದು ಶಶಾಂಕ್‌ ಹೇಳಿದ್ದಾರೆ.

ದುಬೈ(ಫೆ.24): ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ವೇಳೆ ಭಾರತೀಯ ಆಟಗಾರರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಕೋರಿ ಬಿಸಿಸಿಐ ಬರೆದಿದ್ದ ಪತ್ರಕ್ಕೆ ಐಸಿಸಿ ಅಧ್ಯಕ್ಷ ಶಶಾಂಕ್‌ ಮನೋಹರ್‌ ಉತ್ತರಿಸಿದ್ದಾರೆ. 

ಪಾಕ್ ವಿರುದ್ಧ ವಿಶ್ವಕಪ್: ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ

‘ಆಟಗಾರರ ಸುರಕ್ಷತೆ ಹಾಗೂ ಭದ್ರತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಭದ್ರತೆಗೆ ಸಿದ್ಧಪಡಿಸಿರುವ ಯೋಜನೆಗಳನ್ನು ಬಿಸಿಸಿಐಗೆ ವಿವರಿಸುತ್ತೇವೆ. ಬಿಸಿಸಿಐ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಲಿ. ಮತ್ತಿನ್ಯಾವುದೇ ವ್ಯವಸ್ಥೆ ಅಗತ್ಯವಿದ್ದರೆ ಕಲ್ಪಿಸುತ್ತೇವೆ. ಎಲ್ಲಾ ತಂಡಗಳಿಗೂ ಸೂಕ್ತ ಭದ್ರತೆ ನೀಡಲಾಗುವುದು’ ಎಂದು ಶಶಾಂಕ್‌ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಪಾಕಿಸ್ತಾನ ವಿರುದ್ಧ ಭಾರತ ವಿಶ್ವಕಪ್ ಪಂದ್ಯ ಆಡ್ಬೇಕಾ?

ಬಿಸಿಸಿಐ ಹಾಗೂ ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಸಮಿತಿ[CoA] ಶುಕ್ರವಾರ ಈ ಕುರಿತಂತೆ ಸಭೆ ಸೇರಿ ಚರ್ಚೆ ನಡೆಸಿತಾದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ, ಐಸಿಸಿಗೆ ಪತ್ರಬರೆದಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?