
ಮುಂಬೈ (ಫೆ.16): ಟೀಂ ಇಂಡಿಯಾ ಕ್ರಿಕೆಟ್ ತಂಡದ ಆಲ್'ರೌಂಡರ್ ಯೂಸೂಫ್ ಪಠಾಣ್ ಆಸೆಗೆ ಬಿಸಿಸಿಐ ತಣ್ಣೀರೆರೆಚಿದೆ.
ಹಾಂಕಾಂಗ್ ಟಿ-20 ಲೀಗ್'ನಲ್ಲಿ ಆಡಲು ಈ ಹಿಂದೆ ಅವರಿಗೆ ನೀಡಿದ್ದ ನಿರಾಕ್ಷೇಪಣಾ ಪತ್ರವನ್ನು ಬಿಸಿಸಿಐ ಹಿಂಪಡೆದುಕೊಂಡಿದೆ.
ಕಳೆದ ಕೆಲ ದಿನಗಳ ಹಿಂದೆ ಹಾಂಕಾಂಗ್ ಟಿ-20 ಲೀಗ್'ನಲ್ಲಿ ಆಡಲು ಪಠಾಣ್'ಗೆ ಒಪ್ಪಿಗೆ ಪತ್ರ ನೀಡಿತ್ತು. ಆದರೆ ಇದಾದ ಕೆಲ ದಿನಗಳ ಬಳಿಕ ಟೀಂ ಇಂಡಿಯಾ ಕ್ರಿಕೆಟ್ ತಂಡದ ಕೆಲ ಆಟಗಾರರು ವಿದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಆಡಲು ಆಸಕ್ತಿ ವಹಿಸಿ ಬಿಸಿಸಿಐಗೆ ಪತ್ರ ಬರೆದಿರುವ ಕಾರಣಕ್ಕಾಗಿ ಇವರಿಗೆ ನೀಡಿದ ಎನ್'ಒಸಿ ಹಿಂಡೆದುಕೊಳ್ಳಲಾಗಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.