
ನವದೆಹಲಿ[ಸೆ.12]: ಕಳೆದ 5 ವರ್ಷಗಳ ಕಾಲ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿದ್ದ ಸಂಜಯ್ ಬಾಂಗರ್, ವಿಶ್ವಕಪ್ ನಲ್ಲಿ ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಬಲಿ ಪಶುವಾಗಿದ್ದರು. ಇತ್ತೀಚೆಗಷ್ಟೇ ಬಾಂಗರ್ ಅವರನ್ನು ಬಿಸಿಸಿಐ ಕೋಚ್ ಹುದ್ದೆಯಿಂದ ಕೈ ಬಿಟ್ಟಿತ್ತು.
ಕೈತಪ್ಪಿದ ಕೋಚ್ ಹುದ್ದೆ: ಆಯ್ಕೆಗಾರನ ಜತೆ ಬಾಂಗರ್ ಜಗಳ!
ಇದೀಗ ಮೊದಲ ಬಾರಿಗೆ ಮೌನ ಮುರಿದಿರುವ ಬಾಂಗರ್, ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. 2014ರಿಂದ ಸತತ 3 ವರ್ಷಗಳ ಕಾಲ ಭಾರತ ತಂಡವನ್ನು ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿರುವ ಹಾಗೆ ಮಾಡಿದ್ದೆನು. ಆದರೂ ನನ್ನನ್ನು ಕೋಚ್ ಸ್ಥಾನದಿಂದ ತೆಗೆದುಹಾಕಿದ್ದು ಬೇಸರ ತಂದಿದೆ ಎಂದು ಬಾಂಗರ್ ಹೇಳಿದ್ದಾರೆ.
ಗೇಲ್ ಶತಕ ನೀರಲ್ಲಿ ಹೋಮ, ಪಂದ್ಯದಲ್ಲಿ ದಾಖಲಾಯ್ತು ಬರೋಬ್ಬರಿ 37 ಸಿಕ್ಸರ್..!
ವಿಶ್ವಕಪ್ನಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯ ಅನುಭವಿಸಿತ್ತು. ಅಲ್ಲದೇ ಭಾರತಕ್ಕೆ 4ನೇ ಕ್ರಮಾಂಕದ ಬ್ಯಾಟ್ಸ್ಮನ್ ನೀಡದೆ ಇರುವುದು ಬಾಂಗರ್, ಕೈ ಬಿಡಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.