
ಮೈಸೂರು[ಸೆ.05]: ಶ್ರೇಯಸ್ ಗೋಪಾಲ್ (13ಕ್ಕೆ3) ಮತ್ತು ಆನಂದ್ ದೊಡ್ಡಮನಿ (16ಕ್ಕೆ2) ಅದ್ಭುತ ಪ್ರದರ್ಶನದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್, 7ನೇ ಆವೃತ್ತಿಯ ಕೆಪಿಎಲ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 20 ರನ್ಗಳ ಗೆಲುವು ಸಾಧಿಸಿದೆ.
ಇದರೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ಲೀಗ್ನಲ್ಲಿ ಫೈನಲ್ ಪ್ರವೇಶಿಸಿದೆ. ಮಂಗಳವಾರ ಇಲ್ಲಿನ ಎಸ್ಎನ್ಡಿಆರ್ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಸೆಮೀಸ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 9 ವಿಕೆಟ್ಗೆ 138 ರನ್ಗಳಿಸಿತು.
ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮೈಸೂರು 20 ಓವರ್ಗಳಲ್ಲಿ 9 ವಿಕೆಟ್ಗೆ 118 ರನ್ಗಳಿಸಲಷ್ಟೇ ಶಕ್ತವಾಯಿತು. ಮೈಸೂರು ಪರ ಆರಂಭಿಕ ಅರ್ಜುನ್ ಹೊಯ್ಸಳ (52) ರನ್ಗಳಿಸಿದರು.
ಉಳಿದಂತೆ 8 ಬ್ಯಾಟ್ಸ್ಮನ್ಗಳು ಒಂದಂಕಿ ಮೊತ್ತ ದಾಟಲಿಲ್ಲ.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರು 138/9,
ಮೈಸೂರು ವಾರಿಯರ್ಸ್ 118/9
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.