ಚಿನ್ನಸ್ವಾಮಿಯಂತೆ ರಾಜ್ಯದ ಇತರೆ ಕ್ರೀಡಾಂಗಣಗಳಲ್ಲೂ ಆಧುನಿಕ ವ್ಯವಸೆ

Published : May 30, 2018, 11:16 AM IST
ಚಿನ್ನಸ್ವಾಮಿಯಂತೆ ರಾಜ್ಯದ ಇತರೆ ಕ್ರೀಡಾಂಗಣಗಳಲ್ಲೂ ಆಧುನಿಕ ವ್ಯವಸೆ

ಸಾರಾಂಶ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಂತೆ ರಾಜ್ಯದ ಇತರೆ ಕ್ರೀಡಾಂಗಣಗಳಲ್ಲೂ ಹಸಿರು ಕ್ರಾಂತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಂದಾಗಿದೆ.

ಬೆಂಗಳೂರು(ಮೇ.30) ವಿಶ್ವ ಮಟ್ಟದಲ್ಲಿ ಶ್ರೇಷ್ಠ ಕ್ರೀಡಾಂಗಣ ಎಂಬ ಪ್ರಶಂಸೆಗೆ ಪಾತ್ರರಾಗಿರುವ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಂತೆ ರಾಜ್ಯದ ಇತರೆ ಕ್ರೀಡಾಂಗಣಗಳಲ್ಲೂ ಹಸಿರು ಕ್ರಾಂತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಂದಾಗಿದೆ. ಕ್ರೀಡಾಂಗಣದಲ್ಲಿ ಅಳವಡಿಸಿರುವ ಸೋಲಾರ್ ವ್ಯವಸ್ಥೆ, ನೀರು ನಿರ್ವಹಣೆ, ಕಸ ನಿರ್ವಹಣೆ, ಮಳೆ ನೀರು ಸಂಗ್ರಹಣೆಯಂತಹ ವ್ಯವಸ್ಥೆಗಳನ್ನು ಕೆಎಸ್‌ಸಿಎ ಅಡಿಯಲ್ಲಿ ಬರುವ 4 ಕ್ರೀಡಾಂಗಣದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 


ಮುಂದಿನ ದಿನಗಳಲ್ಲಿ ಮೊದಲ ಹಂತವಾಗಿ ಹುಬ್ಬಳ್ಳಿ, ಶಿವಮೊಗ್ಗ, ಬೆಳಗಾವಿ ಮತ್ತು ಆಲೂರು ಕ್ರೀಡಾಂಗಣಗಳಲ್ಲಿ ಈ ವ್ಯವಸ್ಥೆಯನ್ನು ತರಲಾಗುವುದು ಎಂದು ಕೆಎಸ್‌ಸಿಎ ಸಹಾಯಕ ಕಾರ್ಯದರ್ಶಿ ಸಂತೋಷ್ ಮೆನನ್ ಹೇಳಿದರು. ಕಾರ್ಯಗಾರಕ್ಕೆ ಭಾರೀ ಪ್ರತಿಕ್ರಿಯೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಿರುವ ಪರಿಸರ ಕಾಳಜಿಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಮಂಗಳವಾರ ನಡೆದ ಕಾರ್ಯಗಾರದಲ್ಲಿ 21 ರಾಜ್ಯ ಕ್ರಿಕೆಟ್ ಸಂಸ್ಥೆಗಳು, ಭಾರತ ಹಾಕಿ ಸಂಸ್ಥೆ, ಅಥ್ಲೆಟಿಕ್ಸ್, ಲಾನ್ ಟೆನಿಸ್, ಗಾಲ್ಫ್ ಕ್ಲಬ್‌ಗಳು ಸೇರಿದಂತೆ ಇತರೆ ಸಂಸ್ಥೆಗಳು ಪಾಲ್ಗೊಂಡಿದ್ದವು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?