
ನವದೆಹಲಿ(ಜು.16): ಟೀಂ ಇಂಡಿಯಾದ ನೂತನ ಪೂರ್ಣಾವಧಿ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ ಎಂದು ವರದಿಯಾಗಿದೆ.
ರವಿಶಾಸ್ತ್ರಿ ಟೀಂ ಇಂಡಿಯಾ ಮುಖ್ಯಕೋಚ್ ಆಗಿ ನೇಮಕವಾದ ಬೆನ್ನಲ್ಲೇ ಜಹೀರ್ ಖಾನ್ ಹಾಗೂ ರಾಹುಲ್ ದ್ರಾವಿಡ್ ಅವರನ್ನು ಕ್ರಮವಾಗಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಸಲಹೆಗಾರರನ್ನಾಗಿ ಕ್ರಿಕೆಟ್ ಸಲಹಾ ಸಮಿತಿ ನೇಮಿಸಿತ್ತು.
ಆದರೆ ರವಿಶಾಸ್ತ್ರಿ ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಬೇಕೆಂದು ಬಯಸಿದ್ದರು. ಅಂತಿಮವಾಗಿ ಶಾಸ್ತ್ರಿ ಒತ್ತಡಕ್ಕೆ ಮಣಿದ ಬಿಸಿಸಿಐ ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ ಎನ್ನಲಾಗುತ್ತಿದೆ.
ಜಹೀರ್ ಖಾನ್ ವರ್ಷದಲ್ಲಿ ಕೇವಲ 5 ತಿಂಗಳು ಮಾತ್ರ ಕೋಚ್ ಆಗಲು ಒಪ್ಪಿಕೊಂಡಿದ್ದರು. ಆದರೆ ಶಾಸ್ತ್ರಿ ಪೂರ್ಣಾವಧಿ ಬೌಲಿಂಗ್ ಬೇಕೆಂದು ಬಯಸಿದ್ದರು. ಈ ಕಾರಣದಿಂದಲೇ ಅರುಣ್ ಅವರನ್ನು ಕೋಚ್ ಆಗಿ ನೇಮಿಸಲಾಗಿದೆ ಎನ್ನಲಾಗುತ್ತಿದೆ.
ಭರತ್ ಅರುಣ್ 2014ರಿಂದ 2016ರವರೆಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.