
ಪುಣೆ(ಅ.25): ಭುವನೇಶ್ವರ್ ಕುಮಾರ್ ಮಾರಕ ದಾಳಿ ಹಾಗೂ ಧವನ್ ಮತ್ತು ದಿನೇಶ್ ಕಾರ್ತಿಕ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-1 ಅಂತರದ ಸಮಬಲ ಸಾಧಿಸಿದೆ.
ನ್ಯೂಜಿಲೆಂಡ್ ನೀಡಿದ್ದ 231 ರನ್'ಗಳ ಗುರಿಯನ್ನು ಭಾರತ ಕೇವಲ 4 ವಿಕೆಟ್ ಕಳೆದುಕೊಂಡ ಜಯದ ನಗೆ ಬೀರಿದೆ. ಟೀಂ ಇಂಡಿಯಾ ಪರ ಶಿಖರ್ ಧವನ್ 68 ಹಾಗೂ ದಿನೇಶ್ ಕಾರ್ತಿಕ್ ಅಜೇಯ 64 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಈ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ನ್ಯೂಜಿಲೆಂಡ್'ಗೆ ವೇಗಿ ಭುವನೇಶ್ವರ್ ಕುಮಾರ್(45/3) ಮಾರಕವಾಗಿ ಪರಿಣಮಿಸಿದರು. ನ್ಯೂಜಿಲೆಂಡ್ ಪರ ಹೆನ್ರಿ ನಿಕೋಲಸ್(42) ಹಾಗೂ ಕಾಲಿನ್ ಡಿ ಗ್ರಾಂಡ್'ಹೋಂ(41) ಹೊರತು ಪಡಿಸಿದಂತೆ ಬೇರೆ ಯಾವ ಬ್ಯಾಟ್ಸ್'ಮನ್'ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ.
ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಚಾಹಲ್ ಹಾಗೂ ಬುಮ್ರಾ ತಲಾ 2 ವಿಕೆಟ್ ಪಡೆದರು. ಇನ್ನು ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಹಂಚಿಕೊಂಡರು.
ಇನ್ನು ಮೂರನೇ ಪಂದ್ಯವು ಅಕ್ಟೋಬರ್ 29ರಂದು ಕಾನ್ಪುರದಲ್ಲಿ ನಡೆಯಲಿದ್ದು ಸರಣಿ ಗೆಲುವಿಗಾಗಿ ಉಭಯ ತಂಡಗಳು ಕಾದಾಡಲಿವೆ.
ಸಂಕ್ಷಿಪ್ತ ಸ್ಕೋರ್:
ನ್ಯೂಜಿಲೆಂಡ್: 230/9(50 ಓ)
ಹೆನ್ರಿ ನಿಕೋಲಸ್ :42
ಕಾಲಿನ್ ಡಿ ಗ್ರಾಂಡ್'ಹೋಂ :41
ಭುವನೇಶ್ವರ್ ಕುಮಾರ್ : 45/3
ಭಾರತ: 232/4(46 ಓ)
ಶಿಖರ್ ಧವನ್ : 68
ದಿನೇಶ್ ಕಾರ್ತಿಕ್ : 64*
ಆ್ಯಡಂ ಮಿಲ್ನೆ: 21/1
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.