
ನವದೆಹಲಿ(ನ.21): ಇದೇ ನ.24 ರಿಂದ 28ರ ವರೆಗೆ ನಾಗ್ಪುರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಸ್ಟಾರ್ ಆಟಗಾರರು ಕಣಕ್ಕಿಳಿಯುತ್ತಿಲ್ಲ.
ಹೌದು, ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅಲಭ್ಯರಾಗಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಈ ಇಬ್ಬರೂ ಆಟಗಾರರು ಲಂಕಾ ವಿರುದ್ಧದ ಟೆಸ್ಟ್'ನಲ್ಲಿ ಆಡುತ್ತಿಲ್ಲ. ಭುವನೇಶ್ವರ್ ಕುಮಾರ್ ಮುಂದಿನ 2 ಟೆಸ್ಟ್ ಪಂದ್ಯಗಳಿಗೂ ಅಲಭ್ಯವಾದರೆ, ಧವನ್ ಅಂತಿಮ ಟೆಸ್ಟ್'ಗೆ ಲಭ್ಯವಿರಲಿದ್ದಾರೆ.
ಭುವಿ ಬದಲಿಗೆ ತಮಿಳುನಾಡಿನ ಆಲ್ರೌಂಡರ್ ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಶಂಕರ್ ಇದೇ ಮೊದಲ ಬಾರಿ ರಾಷ್ಟ್ರೀಯ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಾಗಿದ್ದು, ಅಂತಿಮ 11ರ ಬಳಗದಲ್ಲಿನ ಸ್ಥಾನ ಖಚಿತವಾಗಿಲ್ಲ.
ಮೊದಲ ಟೆಸ್ಟ್'ನಲ್ಲಿ ಭುವಿ 8 ವಿಕೆಟ್ ಕಬಳಿಸಿ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರೆ, ಧವನ್ ಎರಡನೇ ಇನಿಂಗ್ಸ್'ನಲ್ಲಿ 94 ರನ್ ಬಾರಿಸಿ ಗಮನ ಸೆಳೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.