
ಪುಣೆ(ನ.23): ಹಿಂದಿ ಬಿಗ್ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಯಾಗಿರುವ ಕ್ರಿಕೆಟಿಗ ಎಸ್.ಶ್ರೀಶಾಂತ್ ಮತ್ತೆ ಸುದ್ದಿಯಲ್ಲಿದ್ದಾರೆ. 2008ರ ಐಪಿಎಲ್ ಟೂರ್ನಿಯಲ್ಲಿ ನಡೆದ ಕಪಾಳ ಮೋಕ್ಷ ಪ್ರಕರಣವನ್ನ ಕೇರಳಾ ಎಕ್ಸ್ಪ್ರೆಸ್ ಶ್ರೀಶಾಂತ್ ಬಿಚ್ಚಿಟ್ಟಿದ್ದಾರೆ.
ಬಿಗ್ಬಾಸ್ ಮನೆಯಲ್ಲಿನ ಕ್ಯಾಪ್ಟನ್ ಟಾಸ್ಕ್ನಿಂದ 2008ರ ಐಪಿಎಲ್ ಕಪಾಳ ಮೋಕ್ಷ ಪ್ರಕರಣ ಮತ್ತೆ ಸದ್ದು ಮಾಡಿದೆ. ಇಷ್ಟೇ ಅಲ್ಲ ಅಂದು ನಿಜಕ್ಕೂ ನಡೆದಿದ್ದೇನು ಅನ್ನೋದನ್ನ ಶ್ರೀ ಬಿಗ್ಬಾಸ್ ಸಹ ಸ್ಪರ್ಧಿ ಜೊತೆ ಹೇಳಿಕೊಂಡಿದ್ದಾರೆ.
2008ರ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಶ್ರೀಶಾಂತ್ ಕಿಂಗ್ಸ್ ಇಲೆವೆನ ಪಂಜಾಬ್ ಪರ ಕಣಕ್ಕಿಳಿದಿದ್ದರೆ, ಹರ್ಭಜನ್ ಸಿಂಗ್ ಮುಂಬೈ ಇಂಡಿಯನ್ಸ್ ಪರ ಆಡಿದ್ದರು.
ಈ ಪಂದ್ಯದಲ್ಲಿ ಪಂಜಾಬ್ ಗೆಲುವಿನ ನಗೆ ಬೀರಿತ್ತು. ಪಂದ್ಯದ ಬಳಿಕ ಶೇಕ್ಹ್ಯಾಂಡ್ ಮಾಡಲು ಹೋದ ನನಗೆ ಹರ್ಭಜನ್ ಸಿಂಗ್ ಕೆನ್ನೆಗೆ ಹೊಡೆದರು. ನಾನು ತುಂಬಾ ಅಗ್ರೆಸ್ಸೀವ್ ಒಪ್ಪಿಕೊಳ್ಳುತ್ತೇನೆ. ಆದರೆ ಅದು ಕೇವಲ ಕಪಾಳ ಮೋಕ್ಷ ಆಗಿರಿಲಿಲ್ಲ, ಹಲ್ಲೆಯಾಗಿತ್ತು. ಆ ಸಂದರ್ಭದಲ್ಲಿ ನಾನು ಅಸಾಹಾಯಕನಾಗಿದ್ದೆ. ಅದು ನನಗೆ ಅಳು ತರಿಸಿತ್ತು ಎಂದು ಶ್ರೀಶಾಂತ್ ಕಪಾಳ ಮೋಕ್ಷ ಪ್ರಕರಣವನ್ನ ಬಿಚ್ಚಿಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.