
ನವದೆಹಲಿ(ಜ.04): ಆಲ್ ಇಂಡಿಯಾ ಟೆನಿಸ್ ಸಂಸ್ಥೆ(ಎಐಟಿಎ)ಯಲ್ಲಿ ಯಾವ ಆಧಾರದಲ್ಲಿ ಆಟಗಾರರ ಆಯ್ಕೆ ಮಾಡಲಾಗುತ್ತದೆ ಎಂದು ಭಾರತದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಪ್ರಶ್ನಿಸಿದ್ದಾರೆ.
ಸ್ಪೇನ್ ವಿರುದ್ಧದ ಡೇವಿಸ್ ಕಪ್ ಟೂರ್ನಿಯಲ್ಲಿ ಗಾಯದ ಸಮಸ್ಯೆ ಎಂದು ರೋಹನ್ ಬೋಪಣ್ಣರನ್ನು ಹೊರಗಿಡಲಾಗಿತ್ತು.
2016ರ ಸೆಪ್ಟೆಂಬರ್ ವೇಳೆ ನಡೆದ ವಿಶ್ವ ಗುಂಪಿನ ಪ್ಲೇ ಆಫ್ ಟೂರ್ನಿಯ ವೇಳೆ ನಾನು ಯಾವುದೇ ಗಾಯದ ಸಮಸ್ಯೆಗೆ ಒಳಗಾಗಿರಲಿಲ್ಲ ಆದರೂ ನನ್ನನ್ನು ಹೊರಗಿಟ್ಟದ್ದು ಯಾಕೆ ಎನ್ನುವುದು ತಿಳಿದಿಲ್ಲ ಎಂದು ಬೋಪಣ್ಣ ಹೇಳಿದ್ದಾರೆ.
ರಾಷ್ಟ್ರೀಯ ತಂಡದಲ್ಲಿ ಆಡುವುದಕ್ಕಾಗಿ ಆಟಗಾರರನ್ನು ಯಾರು ಆಯ್ಕೆ ಮಾಡುತ್ತಾರೆ ಎನ್ನುವುದು ಸಾಕಷ್ಟು ಗೊಂದಲ ಸೃಷ್ಟಿಸಿದೆ ಎಂದು ಬೋಪಣ್ಣ ತಿಳಿಸಿದ್ದಾರೆ.
ಪುಣೆಯಲ್ಲಿ ಫೆಬ್ರವರಿ ತಿಂಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆಯಲಿರುವ ಡೇವಿಸ್ ಕಪ್ ಟೂರ್ನಿಗೆ ರೋಹನ್ ಬೋಪಣ್ಣ ಆಯ್ಕೆಯಾಗಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.