
ನವದೆಹಲಿ (ಡಿ. 29): ಐಒಎ ಅಜೀವ ಅಧ್ಯಕ್ಷ ಸ್ಥಾನದಿಂದ ಸುರೇಶ್ ಕಲ್ಮಾಡಿ ಕೆಳಗಿಳಿದ ನಂತರ ಅಭಯ್ ಸಿಂಗ್ ಚೌತಾಲಾ ಕೂಡಾ ತಮ್ಮ ಹುದ್ದೆಯನ್ನು ತ್ಯಜಿಸಿಲು ಮುಂದಾಗಿದ್ದಾರೆ. ತಮ್ಮ ನೇಮಕಾತಿಯನ್ನು ಭಾರತೀಯ ಒಲಂಪಿಕ್ ಸಂಸ್ಥೆ ಒಪ್ಪದೇ ಇದ್ದರೆ ರಾಜಿನಾಮೆ ನೀಡಲು ಸಿದ್ಧವಿದ್ದೇನೆ ಎಂದಿದ್ದಾರೆ.
ಸುರೇಶ್ ಕಲ್ಮಾಡಿ ಪ್ರಕರಣ ಭಿನ್ನವಾದದ್ದು. ಕಾಮನ್ ವೆಲ್ತ್ ಕ್ರೀಡೆಗೆ ಸಂಬಂಧಿಸಿದಂತೆ ಕಲ್ಮಾಡಿಯವರ ಮೇಲೆ ಆರೋಪಗಳಿವೆ. ಹಾಗಾಗಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಆದರೆ ನನ್ನ ವಿಚಾರ ಇವರಿಗಿಂತ ಭಿನ್ನವಾದುದು ಎಂದು ಚೌತಾಲಾ ಹೇಳಿದ್ದಾರೆ.
ಐಒಎ ಅಧ್ಯಕ್ಷನಾಗಿ ನಾನು ಆಯ್ಕೆಯಾಗಿದ್ದೆ. ಆದರೆ ಅಂತರಾಷ್ಟ್ರೀಯ ಒಲಂಪಿಕ್ ಸಂಸ್ಥೆಯ ಮೂಗುತೂರಿಸುವಿಕೆಯಿಂದ ನಾನು ಹುದ್ದಯನ್ನು ತ್ಯಜಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಭಯ್ ಚೌತಾಲ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಕ್ರೀಡಾ ಇಲಾಖೆ ಇವರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಚೌತಾಲರವರು ರಾಜಿನಾಮೆಗೆ ಮುಂದಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.