ಟೀಂ ಇಂಡಿಯಾಗೆ ಆಪತ್ಭಾಂದವರಾದ ಪೂಜಾರ-ರಹಾನೆ

Published : Mar 06, 2017, 05:58 AM ISTUpdated : Apr 11, 2018, 12:59 PM IST
ಟೀಂ ಇಂಡಿಯಾಗೆ ಆಪತ್ಭಾಂದವರಾದ ಪೂಜಾರ-ರಹಾನೆ

ಸಾರಾಂಶ

ಚೇತೇಶ್ವರ ಪೂಜಾರ(79*) ಮತ್ತು ಅಜಿಂಕ್ಯಾ ರಹಾನೆ(40*) ಐದನೇ ವಿಕೆಟ್'ಗೆ ಮುರಿಯದ 93 ರನ್ ಜೊತೆಯಾಟವಾಡುವುದರೊಂದಿಗೆ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಬೆಂಗಳೂರು(ಮಾ.06): ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ, ಕನ್ನಡಿಗ ಕೆ.ಎಲ್. ರಾಹುಲ್ ಸಮಯೋಚಿತ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ ಎರಡನೇ ಟೆಸ್ಟ್'ನಲ್ಲಿ ಕಮ್'ಬ್ಯಾಕ್ ಮಾಡುವತ್ತಾ ಹೆಜ್ಜೆಯಿಟ್ಟಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಮುಕ್ತಾಯಕ್ಕೆ ಟೀಂ ಇಂಡಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿದೆ. ಈ ಮೂಲಕ ಕೊಹ್ಲಿ ಪಡೆ 126 ರನ್'ಗಳ ಮುನ್ನೆಡೆ ಸಾಧಿಸಿದೆ. ಚೇತೇಶ್ವರ ಪೂಜಾರ(79*) ಮತ್ತು ಅಜಿಂಕ್ಯಾ ರಹಾನೆ(40*) ಐದನೇ ವಿಕೆಟ್'ಗೆ ಮುರಿಯದ 93 ರನ್ ಜೊತೆಯಾಟವಾಡುವುದರೊಂದಿಗೆ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವನ್ನು 276 ರನ್'ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಆಸೀಸ್ ಪಡೆ ಮೊದಲ ಇನಿಂಗ್ಸ್'ನಲ್ಲಿ 87 ರನ್'ಗಳ ಮುನ್ನೆಡೆ ಸಾಧಿಸಿತು.

ಭಾರತ ಪರ ರವೀಂದ್ರ ಜಡೇಜಾ 63/6 ವಿಕೆಟ್ ಪಡೆದು ಮಿಂಚಿದರು. ಇನ್ನು ಅಶ್ವಿನ್ 2 ವಿಕೆಟ್ ಪಡೆದರೆ, ವೇಗಿಗಳಾದ ಇಶಾಂತ್ ಹಾಗೂ ಉಮೇಶ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

ಎರಡನೇ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಆರಂಭ ಕೂಡ ಅಷ್ಟೇನು ಉತ್ತಮವಾಗಿರಲಿಲ್ಲ. ತಂಡದ ಮೊತ್ತ 39 ರನ್'ಗಳಿದ್ದಾಗ ಅಭಿನವ್ ಮುಕುಂದ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ನಂತರ ಅರ್ಧಶತಕ ಸಿಡಿಸಿದ ಕನ್ನಡಿಗ ಕೆ.ಎಲ್ ರಾಹುಲ್ ಆಸೀಸ್ ನಾಯಕ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್'ಗೆ ಬಲಿಯಾದರು. ಇದಾದ ಕೆಲಹೊತ್ತಿನಲ್ಲೇ ನಾಯಕ ವಿರಾಟ್ ಕೂಡಾ 15 ಗಳಿಸಿ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ಇನ್ನು ಮೇಲ್ಪಂಕ್ತಿಗೆ ಬಡ್ತಿ ಪಡೆದು ಆಡಲಿಳಿದ ಜಡೇಜಾ ಆಟ ಕೇವಲ 2 ರನ್'ಗಳಿಗೆ ಸೀಮಿತವಾಯಿತು.

 ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ನೆಲಕಚ್ಚಿ ಆಟವಾಡಿದ ಚೇತೇಶ್ವರ ಪೂಜಾರ ಅರ್ಧಶತಕ ಪೂರೈಸಿದರು. ಇವರಿಗೆ ಅಜಿಂಕ್ಯಾ ರಹಾನೆ ತಕ್ಕ ಸಾಥ್ ನೀಡಿದರು.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?