ಶಾಸ್ತ್ರಿ ಓಕೆ ಜಹೀರ್, ದ್ರಾವಿಡ್ ಯಾಕೆ? ಸಿಒಎ ಅಸಮಾಧಾನ

Published : Jul 13, 2017, 07:29 PM ISTUpdated : Apr 11, 2018, 12:44 PM IST
ಶಾಸ್ತ್ರಿ ಓಕೆ ಜಹೀರ್, ದ್ರಾವಿಡ್ ಯಾಕೆ? ಸಿಒಎ ಅಸಮಾಧಾನ

ಸಾರಾಂಶ

ಮುಖ್ಯ ಕೋಚ್ ರವಿಶಾಸ್ತ್ರಿ ಬೌಲಿಂಗ್ ಸಲಹೆಗಾರರನ್ನಾಗಿ ಭರತ್ ಅರುಣ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಇರಾದೆ ಹೊಂದಿದ್ದರು

ನವದೆಹಲಿ(ಜು.13): ಕ್ರಿಕೆಟ್ ಸಲಹಾ ಸಮಿತಿ ಬ್ಯಾಟಿಂಗ್ ಸಲಹೆಗಾರನಾಗಿ ರಾಹುಲ್ ದ್ರಾವಿಡ್ ಹಾಗೂ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಅವರನ್ನು ನೇಮಕ ಮಾಡಿರುವುದಕ್ಕೆ ಸರ್ವೋಚ್ಚ ನ್ಯಾಯಾಲಯ ನೇಮಿತ ಬಿಸಿಸಿಐ ಆಡಳಿತ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ಬುಧವಾರವಷ್ಟೇ, ರವಿಶಾಸ್ತ್ರಿ ಅವರ ಆಯ್ಕೆಗೆ ಆಡಳಿತ ಸಮಿತಿ, ಸಲಹಾ ಸಮಿತಿಯನ್ನು ಶ್ಲಾಘಿಸಿತ್ತು.

‘ಪ್ರಧಾನ ಕೋಚ್ ಆಯ್ಕೆ ಮಾಡುವುದು ಸಲಹಾ ಸಮಿತಿಯ ಕೆಲಸವಾಗಿತ್ತು. ಆದರೆ ಸಹಾಯಕ ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಪ್ರಧಾನ ಕೋಚ್‌'ಗೆ ನೀಡಬೇಕೇ ಹೊರತು, ಸಲಹಾ ಸಮಿತಿ ಈ ವಿಚಾರದಲ್ಲಿ ತೀರ್ಮಾನ ಕೈಗೊಂಡಿದ್ದು ತಪ್ಪು’ ಎಂದು ಆಡಳಿತ ಸಮಿತಿ ಸದಸ್ಯರೊಬ್ಬರು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈ ವಾರಾಂತ್ಯದಲ್ಲಿ ಸಭೆ ಕರೆದು ಚರ್ಚೆ ನಡೆಸುವ ಸಾಧ್ಯತೆ ಇದೆ.

ಮುಖ್ಯ ಕೋಚ್ ರವಿಶಾಸ್ತ್ರಿ ಬೌಲಿಂಗ್ ಸಲಹೆಗಾರರನ್ನಾಗಿ ಭರತ್ ಅರುಣ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಇರಾದೆ ಹೊಂದಿದ್ದರು. ಆದರೆ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಜಹೀರ್ ಖಾನ್ ಅವರನ್ನು ಆಯ್ಕೆ ಮಾಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್