
ನವದೆಹಲಿ(ಜು.26): ಭಾರತ ಕ್ರಿಕೆಟ್ ತಂಡದ ವ್ಯವಸ್ಥಾಪಕ ಹುದ್ದೆಯ ಸಂದರ್ಶನಕ್ಕೆ ಹಾಜರಾದ 12 ಮಂದಿಗೂ ಸಂದರ್ಶನಕಾರರು ಬೌನ್ಸರ್ ಒಂದನ್ನು ಎಸೆದಿದ್ದಾರೆ.
ಮುಂಬೈ ಹಾಗೂ ನವದೆಹಲಿಯಲ್ಲಿ ಒಟ್ಟು 12 ಮಂದಿಯನ್ನು ಸಂದರ್ಶನ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಒಂದೊಮ್ಮೆ ನೀವು ತಂಡದ ವ್ಯವಸ್ಥಾಪಕರಾಗಿದ್ದರೆ ವಿರಾಟ್ ಕೊಹ್ಲಿ ಹಾಗೂ ಅನಿಲ್ ಕುಂಬ್ಳೆ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯವನ್ನು ಹೇಗೆ ಬಗೆಹರಿಸುತ್ತಿದ್ದಿರಿ ಎಂದು ಪ್ರಶ್ನಿಸಿದ್ದಾರೆಂದು ತಿಳಿದು ಬಂದಿದೆ.
ಕುಂಬ್ಳೆ ಹಾಗೂ ಕೊಹ್ಲಿ ನಡುವೆ ವಿವಾದ ಉದ್ಭವಿಸಿದಂತೆ ಮುಂದಿನ ದಿನಗಳಲ್ಲಿ ಕೋಚ್ ಹಾಗೂ ನಾಯಕನ ನಡುವೆ ಸಮಸ್ಯೆ ಉಂಟಾದರೆ ಅದನ್ನು ಬಗೆಹರಿಸುವುದು ಹೇಗೆ ಎಂಬುದನ್ನು ಮನದಲ್ಲಿರಿಸಿಕೊಂಡು ಸಂದರ್ಶನಕಾರರು ಈ ಪ್ರಶ್ನೆ ಕೇಳಿದ್ದಾರೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.