
ನವದೆಹಲಿ(ಆ.07): ಸಾಮಾಜಿಕ ಜಾಲತಾಣದಲ್ಲಿ ಬೌಂಡರಿ ಸಿಕ್ಸರ್ ಸಿಡಿಸುತ್ತಿದ್ದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಇದೀಗ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಸೆಹ್ವಾಗ್ ವಿವಾದಕ್ಕೆ ಕಾರಣವಾಗಿದ್ದು ದೆಹಲಿ ಕ್ರಿಕೆಟ್ ಸಂಸ್ಥೆಯ ಸಲಹಾ ಸಮಿತಿ ನೇಮಕ ವಿಚಾರದಲ್ಲಿ.
ದೆಹಲಿ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಸಲಹಾ ಸಮಿತಿಗೆ ನೇಮಕಗೊಂಡ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸ್ವಹಿತಾಸಕ್ತಿ ವಿವಾದವನ್ನು ಮೈಮೇಲೆ ಎಳೆದುಕೊಂಡಂತಿದೆ. ಡಿಡಿಸಿಎನ ಕಿರಿಯರ ತಂಡದ ಆಯ್ಕೆ ಸಮಿತಿಗೆ ಸದಸ್ಯರ ನೇಮಕಾತಿ ನಡೆದಿದ್ದು, ಸೆಹ್ವಾಗ್ರ ಸೋದರ ಸಂಬಂಧಿ
ಮಯಾಂಕ್ ತೆಹ್ಲಾನ್ ಸಮಿತಿಯ ಭಾಗವಾಗಿದ್ದಾರೆ.
ಆಯ್ಕೆ ಸಮಿತಿಗೆ ನೇಮಕಗೊಂಡಿರುವ ಸದಸ್ಯರನ್ನು ಸ್ವತಃ ಸೆಹ್ವಾಗ್ ಸಂದರ್ಶಿಸಿದ್ದರು ಎನ್ನಲಾಗಿದೆ. ಈ ಬೆಳವಣಿಗೆ ದೆಹಲಿ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಯಾಂಕ್ ದೆಹಲಿ ಪರ 27 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದರು. 2008ರ ಐಪಿಎಲ್ನಲ್ಲಿ ಸೆಹ್ವಾಗ್ ನಾಯಕತ್ವದ ಡೆಲ್ಲಿ ಡೇರ್ಡೆವಿಲ್ಸ್ ತಂಡದಲ್ಲಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.