
ಪುತ್ತೂರು(ಮಾ.04): ಬಿಜೆಪಿ ನಡೆಸುತ್ತಿದ್ದ ಜನಸುರಕ್ಷಾ ಯಾತ್ರೆಗೆ ಅರಣ್ಯ ಸಚಿವ ರಮನಾಥ್ ರೈ ಅನಿರೀಕ್ಷಿತವಾಗಿ ಭೇಟಿ ನೀಡಿ ಇರಿಸು-ಮುರಿಸಿನ ಸನ್ನಿವೇಶ ಎದುರಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪಾದ ಯಾತ್ರೆಗೆ ಪುತ್ತೂರಿನ ಬೈಪಾಸ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಸಮಾವೇಶಗೊಂಡಿದ್ದರು. ಬೇರೊಂದು ರಸ್ತೆಯಲ್ಲಿ ತೆರಳುತ್ತಿದ್ದ ರಮಾನಾಥ್ ರೈ, ತಮ್ಮ ಬೆಂಗಾವಲು ವಾಹನ ಬಿಟ್ಟು ಬಿಜೆಪಿ ಕಾರ್ಯಕರ್ತರು ನೆರೆದಿದ್ದ ಸ್ಥಳಕ್ಕೆ ರಮಾನಾಥ್ ರೈ ಭೇಟಿ ನೀಡಿದ್ದಾರೆ.
ಸಚಿವರ ಕಾರು ಕಂಡ ಕೂಡಲೇ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಘೋಷಣೆ ಕೂಗುವ ಮೂಲಕ ರೈ ಅವರಿಗೆ ಕಸಿವಿಸಿ ಉಂಟಾಗುವಂತೆ ಮಾಡಿದ್ದಾರೆ. ಬಳಿಕ ಸಚಿವರ ಕಾರನ್ನು ಹಿಂಬಾಲಿಸಿಕೊಂಡು ಬಂದ ಪೊಲೀಸ್ ಬೆಂಗಾವಲು ಪಡೆ ರಸ್ತೆಯಿಂದ ಜನರನ್ನು ಚೆದುರಿಸಿ ಮುಂದೆ ಸಾಗಲು ಅವಕಾಶ ಮಾಡಿಕೊಟ್ಟರು. ರಮಾನಾಥ್ ರೈ ಆ ಸ್ಥಳ ಬಿಟ್ಟು ಹೋಗುವವರೆಗೂ ಬಿಜೆಪಿ ಕಾರ್ಯಕರ್ತರು ಮೋದಿ, ಮೋದಿ ಎಂದು ಘೋಷಣೆ ಕೂಗುತ್ತಲೇ ಇದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.