ಅಮಾನತಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್!

Published : Jan 12, 2019, 09:35 PM ISTUpdated : Jan 12, 2019, 09:48 PM IST
ಅಮಾನತಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್!

ಸಾರಾಂಶ

ಕರಣ್ ಜೋಹರ್ ನಡೆಸಿಕೊಡುವ ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಕುರಿತು ಅಸಭ್ಯ ಹೇಳಿಕೆ ನೀಡಿದ ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಇದೀಗ ಮತ್ತೊಂದು ಆಘಾತವಾಗಿದೆ. ಬಿಸಿಸಿಐ ಅಮಾನತು ಶಿಕ್ಷೆ ನೀಡಿದ ಬೆನ್ನಲ್ಲೇ ಪಾಂಡ್ಯ ಎದುರಾದ ಶಾಕ್ ಏನು? ಇಲ್ಲಿದೆ ವಿವರ.

ಮುಂಬೈ(ಜ.12): ಟಿವಿ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ಟೀಂ ಇಂಡಿಯಾದಿಂದ ಅಮಾನತಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಆಘಾತ ಎದುರಾಗಿದೆ. ಅಸಭ್ಯ ಹೇಳಿಕೆಯಿಂದ ಪಾಂಡ್ಯ ಜೊತೆಗಿನ ಜಾಹೀರಾತು ಒಪ್ಪಂದವನ್ನ ಜಿಲೆಟ್ ಕಂಪೆನಿ ಕಡಿದುಕೊಂಡಿದೆ.

ಇದನ್ನೂ ಓದಿ: ಪಾಂಡ್ಯ, ರಾಹುಲ್‌ ಸಸ್ಪೆಂಡ್: ಸರಣಿಯಿಂದ ಗೇಟ್’ಪಾಸ್

ಜೆಲೆಟ್ ಕಂಪೆನಿ ಹಾರ್ದಿಕ್ ಪಾಂಡ್ಯ ಜೊತೆ ಜಾಹೀರಾತು ಒಪ್ಪಂದ ಮಾಡಿಕೊಂಡಿತ್ತು.  ಆದರೆ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಕುರಿತು ಹಾರ್ಧಿಕ್ ಪಾಂಡ್ಯ ಹಾಗೂ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅಸಭ್ಯ ಹೇಳಿಕೆ ನೀಡಿದ್ದರು. ಹೀಗಾಗಿ ಜಿಲೆಟ್ ಕಂಪೆನಿ ಪಾಂಡ್ಯ ಜೊತೆಗಿನ ಎಂಡೋರ್ಸ್‌ಮೆಂಟ್‌ನಿಂದ ಹಿಂದೆ ಸರಿದಿದೆ.

ಇದನ್ನೂ ಓದಿ:ಪಾಂಡ್ಯ ಕಾಮೋತ್ತೇಜಕ ಹೇಳಿಕೆ: ಯಾಕಪ್ಪಾ ಅಂದೆ ಎಂದು ಕೇಳಿದ ಬಿಸಿಸಿಐ

ಹಾರ್ದಿಕ್ ಹಾಗೂ ರಾಹುಲ್ ಹೇಳಿಕೆಗೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು ಗರಂ ಆಗಿದ್ದಾರೆ.  ಈ ಇಬ್ಬರು ಕ್ರಿಕೆಟಿಗರು ಪ್ರಯಾಣಿಸೋ ಬಸ್‌ನಲ್ಲಿ ನಾನು ಪ್ರಯಾಣ ಮಾಡುವುದಿಲ್ಲ. ಹಾರ್ದಿಕ್ ಹಾಗೂ ರಾಹುಲ್ ಹೇಳಿಕೆಯಿಂದ ಕ್ರಿಕೆಟಿಗರು ತಲೆತಗ್ಗಿಸುವಂತಾಗಿದೆ ಎಂದು ಕ್ರಿಕೆಟಿಗ ಹರ್ಭಜ್ ಸಿಂಗ್ ಹೇಳಿದ್ದಾರೆ. ಇನ್ನು ಅಸಭ್ಯ ಹೇಳಿಕೆಗೆ ಅಮಾನತು ಶಿಕ್ಷೆ ನೀಡಿರುವ ಬಿಸಿಸಿಐ ಕ್ರಮವನ್ನ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸ್ವಾಗತಿಸಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ