
ನವದೆಹಲಿ(ನ.23): ಬಿಸಿಸಿಐನ ಬಿಡುವಿಲ್ಲದ ವೇಳಾಪಟ್ಟಿಯ ಬಗ್ಗೆ ಕಿಡಿಕಾರಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವಿದೇಶಿ ಸರಣಿ ಕೈಗೊಳ್ಳುವಾಗ ಸರಿಯಾದ ಪ್ಲಾನ್ ಮಾಡಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹಾಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧ ಸರಣಿ ಮುಗಿದ ಕೇವಲ 2 ದಿನಗಳ ಬಿಡುವಿನ ಬಳಿಕ ಭಾರತ ತಂಡವು 3 ಟೆಸ್ಟ್, 6 ಒನ್'ಡೇ ಹಾಗೂ 3 ಟಿ20 ಪಂದ್ಯವನ್ನಾಡಲು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದು ವಿದೇಶಿ ಪ್ರವಾಸ ಕೈಗೊಳ್ಳುವಾಗ ಇದು ಸರಿಯಾದ ಪೂರ್ವಸಿದ್ದತೆಯಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಸುಮಾರು 2 ತಿಂಗಳ ಸರಣಿಯಿರುವುದರಿಂದ ಬಿಡುವಿಲ್ಲದೇ ಕ್ರಿಕೆಟ್ ಆಡುವುದು ಕ್ರಿಕೆಟ್ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರದಿಂದ ಭಾರತ ತಂಡವು ಶ್ರೀಲಂಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನಾಡಲಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೊಹ್ಲಿ ಸಮಯ ಹೊಂದಾಣಿಕೆಗಾಗಿ ಹೆಣಗಾಡಬೇಕಾಗಿದೆ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.