
ಕರಾಚಿ(ಡಿ.17): ಕ್ರಿಕೆಟ್ ಕ್ರೀಡೆಯನ್ನು ಸಂಪೂರ್ಣವಾಗಿ ಭ್ರಷ್ಟಾಚಾರ ಮುಕ್ತವಾಗಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನದ ಕಳಂಕಿತ ಕ್ರಿಕೆಟಿಗ ಸಲ್ಮಾನ್ ಬಟ್ ಹೇಳಿದ್ದಾರೆ.
ಆದರೆ, ಆಟಗಾರರ ಮೇಲೆ ಭ್ರಷ್ಟಾಚಾರದ ನೆರಳು ಬೀಳದಂತೆ ತಡೆಯಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯು (ಐಸಿಸಿ) ಕೈಗೊಂಡಿರುವ ಕಟ್ಟು ನಿಟ್ಟಿನ ನಿಯಮಗಳು ಸ್ವಾಗತಾರ್ಹ ಎಂದು ಬಟ್ ಹೇಳಿದ್ದಾರೆ.
2010ರಲ್ಲಿ ನಡೆದಿದ್ದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಐದು ವರ್ಷದ ನಿಷೇಧಕ್ಕೊಳಗಾಗಿದ್ದ ಸಲ್ಮಾನ್ ಬಟ್ ಅವರ ಶಿಕ್ಷೆಯು ಇದೇ ವರ್ಷ ಸೆಪ್ಟಂಬರ್ನಲ್ಲಿ ಮುಗಿದಿದ್ದು ಶೀಘ್ರದಲ್ಲೇ ವೃತ್ತಿಪರ ಕ್ರಿಕೆಟ್'ಗೆ ಮರಳಲು ಅವರು ತಯಾರಿ ನಡೆಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.