
ನವದೆಹಲಿ[ಆ.18]: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿರುವ ರವಿಶಾಸ್ತ್ರಿ, ಶುಕ್ರವಾರ ಸಂದರ್ಶನದ ವೇಳೆ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಮುಂದೆ ಮನವಿಯೊಂದನ್ನು ಸಲ್ಲಿಸಿದರು ಎಂದು ವರದಿಯಾಗಿದೆ.
ಮೊದಲೇ ಫಿಕ್ಸ್ ಆಗಿತ್ತಾ ಟೀಂ ಇಂಡಿಯಾ ಕೋಚ್ ಆಯ್ಕೆ..?
ತಂಡದ ದುರ್ಬಲ ಮಧ್ಯಮ ಕ್ರಮಾಂಕದ ಬಗ್ಗೆ ಸಲಹಾ ಸಮಿತಿ ಸದಸ್ಯರು ಶಾಸ್ತ್ರಿಯನ್ನು ಪ್ರಶ್ನಿಸಿದಾಗ, ಆಟಗಾರರ ಆಯ್ಕೆಯಲ್ಲಿ ತಮ್ಮ ಸಲಹೆಗಳನ್ನು ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮುಂದಿವೆ 4 ಸವಾಲುಗಳು..!
‘ಕಳೆದ ಒಂದು ವರ್ಷದಿಂದ ಶಾಸ್ತ್ರಿಯನ್ನು ಆಯ್ಕೆ ಸಮಿತಿ ಸಭೆಗಳಿಂದ ಹೊರಗಿಡಲಾಗುತ್ತಿದೆ. ಆಯ್ಕೆಗಾರರ ಜತೆ ನಾಯಕ ಮಾತ್ರ ಸಂವಹನ ನಡೆಸುತ್ತಿದ್ದಾರೆ’ ಎಂದು ಸಲಹಾ ಸಮಿತಿ ಸದಸ್ಯರೊಬ್ಬರು ಹೇಳಿದ್ದಾರೆ. ‘ವಿಶ್ವಕಪ್ ವೇಳೆ ಮಧ್ಯಮ ಕ್ರಮಾಂಕಕ್ಕೆ ತಂಡದ ಆಡಳಿತಕ್ಕೆ ಅಗತ್ಯವಿದ್ದಂತಹ ಆಟಗಾರರನ್ನು ಆಯ್ಕೆ ಮಾಡಲಿಲ್ಲ. ಆಯ್ಕೆ ಸಮಿತಿ ಸಭೆ ವೇಳೆ ಕೋಚ್ ಹಾಗೂ ನಾಯಕ ಇಬ್ಬರ ಸಲಹೆಯನ್ನೂ ಪಡೆಯಬೇಕು ಎನ್ನುವುದು ಶಾಸ್ತ್ರಿ ಮನವಿಯಾಗಿದೆ’ ಎಂದು ಸಲಹಾ ಸಮಿತಿ ಸದಸ್ಯರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.