
ತಿರುವನಂತಪುರ(ನ.01): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಲಯ ಕಳೆದುಕೊಂಡಿರಬಹುದು, ಆದರೆ ಅವರ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ.
ಇಲ್ಲಿನ ಕ್ರಿಕೆಟ್ ಪ್ರೇಮಿಗಳು ವಿಂಡೀಸ್ ವಿರುದ್ಧ 5ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಧೋನಿ ಮೇಲೆ ತಮಗಿರುವ ಪ್ರೀತಿ, ಅಭಿಮಾನವನ್ನು ಪ್ರದರ್ಶಿಸಲು ಗ್ರೀನ್ಫೀಲ್ಡ್ ಕ್ರೀಡಾಂಗಣದ ಹೊರಗೆ 35 ಅಡಿ ಕಟೌಟ್ ಅಳವಡಿಸಿದ್ದಾರೆ. ‘ಕೇರಳ ಧೋನಿ ಅಭಿಮಾನಿಗಳ ಸಂಘ’ ಈ ಕಟೌಟ್ ಹಾಕಿದ್ದು, ಭಾರತದ ಯಶಸ್ವಿ ನಾಯಕನನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸಿದೆ.
ಏಕದಿನ ಕ್ರಿಕೆಟ್’ನಲ್ಲಿ ಪ್ರಸಕ್ತ ವರ್ಷ ಧೋನಿ ಕಳಪೆ ಪ್ರದರ್ಶನ ತೋರುತ್ತಿದ್ದು, ಆಡಿದ 12 ಪಂದ್ಯಗಳಲ್ಲಿ ಕೇವಲ 25ರ ಸರಾಸರಿಯಲ್ಲಿ 252 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಾದರೂ ಧೋನಿ ಸಿಡಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.