
ಮುಂಬೈ(ಜ.25): ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ಅಮಾನತು ಶಿಕ್ಷೆಯನ್ನ ಹಿಂಪೆಡೆದ ಬಿಸಿಸಿಐ, ಇಬ್ಬರನ್ನೂ ತಂಡಕ್ಕೆ ಆಯ್ಕೆ ಮಾಡಿದೆ. ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದರೆ, ರಾಹುಲ್ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಿಸಿಸಿಐ ಆಡಳಿತ ಸಮಿತಿ ಅಮಾನತು ಹಿಂಪಡೆದ ಬೆನ್ನಲ್ಲೇ ಆಯ್ಕೆ ಸಮಿತಿ ಇಬ್ಬರನ್ನೂ ತಂಡಕ್ಕೇ ಸೇರಿಸಿಕೊಂಡಿದೆ.
ಮಹಿಳೆಯರ ಕುರಿತು ಅಸಭ್ಯ ಹೇಳಿಕೆಯಿಂದ ಅಮಾನತು ಶಿಕ್ಷೆ ಅನುಭವಿಸಿದ ಈ ಕ್ರಿಕೆಟಿಗರು ಸದ್ಯ ನಿರಾಳರಾಗಿದ್ದಾರೆ. ಆದರೆ ಬಿಸಿಸಿಐ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಹಾರ್ದಿಕ್ ಹಾಗೂ ರಾಹುಲ್ ಮೇಲಿನ ಅಮಾನತು ಹಿಂಪಡೆದಿರುವುದು ಸ್ವಾಗತ ಎಂದಿದ್ದಾರೆ. ಆದರೆ ಇನ್ನೂ ಕೆಲವರು ದೇಶದ ಗೌರವಕ್ಕಿಂತ ದೊಡ್ಡದು ಯಾವುದೂ ಇಲ್ಲ. ಹೀಗಾಗಿ ಇವರ ಅಮಾನತು ಹಿಂಪೆದಿರುವುದ ಸೂಕ್ತ ನಿರ್ಧಾವಲ್ಲ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.