
ವೈಜಾಗ್[ಫೆ.24]: ಸತತ ವೈಫಲ್ಯಗಳಿಂದ ಹೊರಬರುವಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಯಶಸ್ವಿಯಾಗಿದ್ದಾರೆ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ರಾಹುಲ್ ಅರ್ಧಶತಕ ಸಿಡಿಸಿ ವಿಕೆಟ್ ಒಪ್ಪಿಸಿದ್ದಾರೆ. ಇದೀಗ 15 ಓವರ್ ಮುಕ್ತಾಯದ ವೇಳೆಗೆ ಭಾರತ 6 ವಿಕೆಟ್ ಕಳೆದುಕೊಂಡು 100 ರನ್ ಬಾರಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಶಿಖರ್ ಧವನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ರಾಹುಲ್ ಭರ್ಜರಿ ಇನ್ನಿಂಗ್ಸ್ ಕಟ್ಟಿದರು. ಎರಡನೇ ವಿಕೆಟ್’ಗೆ ನಾಯಕ ವಿರಾಟ್ ಕೊಹ್ಲಿ ಕೂಡಿಕೊಂಡ ರಾಹುಲ್ 55 ರನ್’ಗಳ ಜತೆಯಾಟ ನಿಭಾಯಿಸಿದರು. ಈ ವೇಳೆ 24 ರನ್ ಸಿಡಿಸಿ ಮುನ್ನುಗ್ಗುತ್ತಿದ್ದ ವಿರಾಟ್ ಬಲಿ ಪಡೆಯುವಲ್ಲಿ ಜಂಪಾ ಯಶಸ್ವಿಯಾದರು. ಇನ್ನು ಪಂತ್ 3 ಹಾಗೂ ದಿನೇಶ್ ಕಾರ್ತಿಕ್ ಹಾಗೂ ಕೃನಾಲ್ ತಲಾ 1 ರನ್ ಬಾರಿಸಿ ಪೆವಿಲಿಯನ್ ಸೇರುವ ಮೂಲಕ ನಿರೀಕ್ಷೆ ಹುಸಿಗೊಳಿಸಿದರು.
ಇದೀಗ ಧೋನಿ ಹಾಗೂ ಉಮೇಶ್ ಯಾದವ್ ಬ್ಯಾಟಿಂಗ್ ನಡೆಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.