
ಲಖನೌ[ನ.06]: ಭಾರತ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಇಂದು ಏಕನಾ ಅಂತರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿದ್ದು, ಪಂದ್ಯ ಆರಂಭಕ್ಕೇ ಕೆಲವು ಗಂಟೆಗಳು ಬಾಕಿಯಿರುವಾಗಲೇ ಕ್ರೀಡಾಂಗಣಕ್ಕೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಹೆಸರಿಡಲಾಗಿದೆ.
ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರ ಅಖಿಲೇಶ್ ಯಾದವ್ ಅವರ ಕನಸಿನ ಕ್ರೀಡಾಂಗಣ ಇದಾಗಿದ್ದು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ’ ಎಂದು ಹೆಸರಿಡಲಾಗಿದೆ.
ಉತ್ತರಪ್ರದೇಶದ ರಾಜಧಾನಿಯಲ್ಲಿ ಭವ್ಯ ಮೈದಾನ ನಿರ್ಮಿಸಲಾಗಿದ್ದು, ಚೊಚ್ಚಲ ಅಂತರಾಷ್ಟ್ರೀಯ ಪಂದ್ಯಕ್ಕೆ ವೇದಿಕೆ ವಹಿಸಲಿದೆ. ಲಖನೌನ ಏಕನಾ ಕ್ರೀಡಾಂಗಣ ಇದೇ ಮೊದಲ ಬಾರಿಗೆ ಅಂ.ರಾ.ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. 2017ರಲ್ಲಿ ಸಿದ್ಧಗೊಂಡ ಕ್ರೀಡಾಂಗಣದಲ್ಲಿ 2017-18ರ ದುಲೀಪ್ ಟ್ರೋಫಿ ಫೈನಲ್ ಸೇರಿ 2 ಪ್ರಥಮ ದರ್ಜೆ ಪಂದ್ಯಗಳು ನಡೆದಿವೆ. 50,000 ಆಸನ ಸಾಮರ್ಥ್ಯ ಹೊಂದಿರುವ ಏಕನಾ, ಭಾರತದ ಅತಿದೊಡ್ಡ ಕ್ರೀಡಾಂಗಣಗಳಲ್ಲಿ ಒಂದೆನಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.