
ತಿರುವನಂತಪುರಂ[ನ.01]: ಭಾರತ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ವೆಸ್ಟ್ ಇಂಡೀಸ್ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಳಿದರೆ, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ವೆಸ್ಟ್ ಇಂಡೀಸ್ ತಂಡದಿಂದ ಆ್ಯಂಡ್ರೆ ನರ್ಸ್ ಹಾಗೂ ಹೇಮ್’ರಾಜ್ ಚಂದ್ರಪಾಲ್ ಅವರನ್ನು ಕೈಬಿಟ್ಟು, ದೇವೇಂದ್ರ ಬಿಶೂ ಹಾಗೂ ಓಸಾನೆ ಥಾಮಸ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
ಈಗಾಗಲೇ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇಂದಿನ ಪಂದ್ಯವನ್ನು ಜಯಿಸುವುದರೊಂದಿಗೆ ವಿರಾಟ್ ಪಡೆ ಸರಣಿ ಕೈವಶ ಮಾಡಿಕೊಳ್ಳುವ ವಿಶ್ವಾದಲ್ಲಿದ್ದರೆ, ವೆಸ್ಟ್ ಇಂಡೀಸ್ ತಂಡ ಈ ಪಂದ್ಯವನ್ನು ಗೆದ್ದು ಸರಣಿ ಸಮ ಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ.
ಈ ಏಕದಿನ ಪಂದ್ಯದ ಬಳಿಕ ಸುಮಾರು ಎರಡು ತಿಂಗಳುಗಳ ಕಾಲ ಟೀಂ ಇಂಡಿಯಾ ಏಕದಿನ ಸರಣಿ ಆಡುತ್ತಿಲ್ಲ. ಇದಾದ ನಂತರ ಜನವರಿ 12ರಂದು ಭಾರತ ಆಸ್ಟ್ರೇಲಿಯಾ ಎದುರು ಏಕದಿನ ಸರಣಿ ಆಡಲಿದೆ.
ತಂಡಗಳು ಹೀಗಿವೆ:
ಭಾರತ:
ವೆಸ್ಟ್ ಇಂಡೀಸ್:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.