
ನವದೆಹಲಿ[ಸೆ.22]: ಭಾರತ ಪ್ರವಾಸ ಕೈಗೊಳ್ಳಲಿರುವ ವೆಸ್ಟ್ಇಂಡೀಸ್ ತಂಡ, ಸೆ.29ರಿಂದ ಬರೋಡಾದಲ್ಲಿ 2 ದಿನಗಳ ಅಭ್ಯಾಸ ಪಂದ್ಯವನ್ನಾಡಲಿದ್ದು ಬಿಸಿಸಿಐ ಅಧ್ಯಕ್ಷರ ಇಲೆವೆನ್ ತಂಡವನ್ನು ಕರ್ನಾಟಕದ ಕರುಣ್ ನಾಯರ್ ಮುನ್ನಡೆಸಲಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ 13 ಸದಸ್ಯರ ತಂಡವನ್ನು ಪ್ರಕಟಿಸಿತು. ವೆಸ್ಟ್’ಇಂಡೀಸ್-ಭಾರತ ನಡುವಿನ 2 ಟೆಸ್ಟ್ ಪಂದ್ಯಗಳ ಸರಣಿ ಅಕ್ಟೋಬರ್ 4ರಿಂದ ಆರಂಭಗೊಳ್ಳಲಿದೆ. ತಂಡದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ಗೆ ಸ್ಥಾನ ನೀಡಲಾಗಿದೆ.
ತಂಡ: ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಹನುಮ ವಿಹಾರಿ, ಕರುಣ್ ನಾಯರ್ (ನಾಯಕ), ಶ್ರೇಯಸ್ ಅಯ್ಯರ್, ಅಂಕಿತ್ ಬಾವ್ನೆ, ಇಶಾನ್ ಕಿಶನ್, ಜಲಜ್ ಸಕ್ಸೇನಾ, ಸೌರಭ್ ಕುಮಾರ್, ಬಸಿಲ್ ಥಂಪಿ, ಆವೇಶ್ ಖಾನ್, ಕೆ.ವಿಗ್ನೇಶ್, ಇಶಾನ್ ಪೊರೆಲ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.