ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರುಂಟು..? ಯಾರಿಲ್ಲ..?

Published : Oct 27, 2018, 11:48 AM IST
ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರುಂಟು..? ಯಾರಿಲ್ಲ..?

ಸಾರಾಂಶ

ನ.4ರಿಂದ ನಡೆಯಲಿರುವ ವಿಂಡೀಸ್ ವಿರುದ್ಧದ 3 ಟಿ20 ಪಂದ್ಯಗಳ ಸರಣಿ ಹಾಗೂ ತದ ನಂತರ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯಿಂದ ಧೋನಿಯನ್ನು ಕೈಬಿಡಲಾಗಿದೆ. ತಂಡದ ಕಾಯಂ ಸದಸ್ಯರಾಗಿ ಸ್ಥಿರಗೊಂಡ ನಂತರ ಧೋನಿ ಅವರನ್ನು ಇದೇ ಮೊದಲ ಬಾರಿಗೆ ಭಾರತ ತಂಡದಿಂದ ಕೈಬಿಡಲಾಗಿದ್ದು, ಕ್ರಿಕೆಟ್ ಲೋಕದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಮುಂಬೈ: ಅಚ್ಚರಿ ಹಾಗೂ ಅನಿರೀಕ್ಷಿತ ನಿರ್ಧಾರವೊಂದರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತದ ಟಿ20 ತಂಡದಿಂದ ಕೈಬಿಟ್ಟಿದೆ.

ನ.4ರಿಂದ ನಡೆಯಲಿರುವ ವಿಂಡೀಸ್ ವಿರುದ್ಧದ 3 ಟಿ20 ಪಂದ್ಯಗಳ ಸರಣಿ ಹಾಗೂ ತದ ನಂತರ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯಿಂದ ಧೋನಿಯನ್ನು ಕೈಬಿಡಲಾಗಿದೆ. ತಂಡದ ಕಾಯಂ ಸದಸ್ಯರಾಗಿ ಸ್ಥಿರಗೊಂಡ ನಂತರ ಧೋನಿ ಅವರನ್ನು ಇದೇ ಮೊದಲ ಬಾರಿಗೆ ಭಾರತ ತಂಡದಿಂದ ಕೈಬಿಡಲಾಗಿದ್ದು, ಕ್ರಿಕೆಟ್ ಲೋಕದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದು ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಧೋನಿ ಭವಿಷ್ಯ ಅಂತ್ಯ ಎಂದೇ ಬಣ್ಣಿಸಲಾಗುತ್ತಿದೆ.  37ರ ಹರೆಯದ ಧೋನಿ, ಭಾರತದ ಪರ 93 ಟಿ20 ಪಂದ್ಯಗಳನ್ನಾಡಿದ್ದು, 37ರ ಸರಾಸರಿ ಹಾಗೂ 127ರ ಸ್ಟ್ರೈಕ್‌ರೇಟ್‌ನೊಂದಿಗೆ 1487 ರನ್ ಗಳಿಸಿದ್ದಾರೆ.

 

ಧೋನಿಗೆ ಇದು ದಿ ಎಂಡ್ ಅಲ್ಲ
ಭಾರತ ಆಡಲಿರುವ ಮುಂದಿನ 6 ಟಿ20 ಪಂದ್ಯಗಳಿಗೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆರಿಸಲಾಗಿದೆ. ಸುದೀರ್ಘ ಕಾಲದಿಂದ ಈ ಪಾತ್ರವನ್ನು ನಿರ್ವಹಿಸುತ್ತಿರುವ ಧೋನಿ ಅವರಿಗೊಂದು ಸೂಕ್ತ ಪರ್ಯಾಯ ಇರಬೇಕೆಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರರ್ಥ ಭಾರತ ಟಿ20 ತಂಡದಲ್ಲಿ ಧೋನಿ ಅವರ
ಯುಗ ಮುಗಿಯಿತು ಎಂದಲ್ಲ.
- ಎಂ.ಎಸ್.ಕೆ.ಪ್ರಸಾದ್, ಆಯ್ಕೆ ಸಮಿತಿ ಮುಖ್ಯಸ್ಥ

ವಿಂಡೀಸ್ ಟಿ20: ಕೊಹ್ಲಿಗೆ ರೆಸ್ಟ್, ರೋಹಿತ್ ನಾಯಕ

ಈ ಮಧ್ಯೆ, ನ.4ರಿಂದ ನ.11ರವರೆಗೆ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ, ತದ ನಂತರ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 3 ಟಿ20 ಹಾಗೂ 4 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳ ಸಂದರ್ಭದಲ್ಲಿ ಕೊಹ್ಲಿ ಮತ್ತೆ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

ವಿಂಡೀಸ್ ಟಿ20ಗೆ ತಂಡ: ರೋಹಿತ್ (ನಾಯಕ), ಧವನ್, ರಾಹುಲ್, ಕಾರ್ತಿಕ್, ಪಾಂಡೆ, ಶ್ರೇಯಸ್ ಅಯ್ಯರ್, ಪಂತ್, ಕೃನಾಲ್, ವಾಷಿಂಗ್ಟನ್ ಸುಂದರ್, ಚೆಹಲ್, ಕುಲ್ದೀಪ್, ಭುವನೇಶ್ವರ್, ಬುಮ್ರಾ, ಖಲೀಲ್, ಉಮೇಶ್, ಶಾಬಾಜ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?